ಮುಂದೂಡುತ್ತಿಲ್ಲ ಕೆಪಿಎಸ್‌ಸಿ ಪರೀಕ್ಷೆ, ಅಭ್ಯರ್ಥಿಗಳಿಗೆ ಕಾಡುತ್ತಿದೆ ಕೊರೊನಾ ಭಯ

ಬೆಂಗಳೂರು: ಕೋವಿಡ್‌ -19 ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿರ್ಬಂಧ ಜಾರಿಯಲ್ಲಿದ್ದರೂ, ಕರ್ನಾಟಕ ಲೋಕಸೇವಾ ಆಯೋಗ ( ) ನಡೆಸಲ್ಪಡುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪರೀಕ್ಷೆಯನ್ನು ನಿಗದಿತ ದಿನಾಂಕದಂದು ನಡೆಸಲು ಮುಂದಾಗಿರುವುದು ಅಭ್ಯರ್ಥಿಗಳಲ್ಲಿ ಆತಂಕ ಮೂಡಿಸಿದೆ. ಪರೀಕ್ಷೆ ಬರೆಯಲು ದೇಶದ ವಿವಿಧ ಮೂಲೆಗಳಿಂದ ಹಾಗೂ ವಿದೇಶದಿಂದಲೂ ಅಭ್ಯರ್ಥಿಗಳು ಬರುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಕೊರೊನಾ ಹರಡುತ್ತಿದ್ದು ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೋವಿಡ್‌ -19 ಭೀತಿಯಿಂದ ಸಭೆ ಸಮಾರಂಭಗಳಿಗೆ ರಾಜ್ಯದಲ್ಲಿ ನಿರ್ಬಂಧ ಹೇರಲಾಗಿದೆ. ಶಾಲಾ ಕಾಲೇಜುಗಳನ್ನು ಸ್ಥಗಿತಗೊಳಿಸಲಾಗಿದೆ. ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂಜಾಗರೂಕತಾ ಕ್ರಮವಾಗಿ ಮುಂದೂಡಲಾಗಿದೆ. ಹೀಗಿದ್ದರೂ ಕೆಪಿಎಸ್‌ಸಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪರೀಕ್ಷೆಯನ್ನು ಮಾರ್ಚ್‌ 22 ( ಭಾನುವಾರ) ದಂದು ನಡೆಸಲು ನಿರ್ಧರಿಸಿದೆ. ಪರೀಕ್ಷಾ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನೂ ಬಿಡುಗಡೆ ಮಾಡಿದ್ದು ಅಭ್ಯರ್ಥಿಗಳಲ್ಲಿ ಆತಂಕ ಮೂಡಿದೆ. ಕೆಪಿಎಸ್‌ಸಿಯ ನಡೆಯ ಕುರಿತಾಗಿ ಕೆಲವು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೆಪಿಎಸ್‌ಸಿ ಎಫ್‌ಡಿಎ 2018ರ ದಾಖಲೆ ಪರಿಶೀಲನೆ ಸೇರಿದಂತೆ ಇನ್ನಿತರ ಕಾರ್ಯ ಚಟುವಟಿಕೆಯನ್ನು ಕೊರೊನಾ ಕಾರಣಕ್ಕಾಗಿ ಮುಂದೂಡಿದೆ. ಆದರೆ ಕೇವಲ ಈ ಪರೀಕ್ಷೆಯನ್ನು ನಡೆಸುವಂತಹ ಬೇಜವಾಬ್ಧಾರಿ ನಿರ್ಧಾರವನ್ನು ಕೈಗೊಂಡು ಗಾಬರಿ ಮೂಡಿಸಿದ್ದಾರೆ” ಎನ್ನುತ್ತಾರೆ ಓರ್ವ ಪರೀಕ್ಷಾ ಅಭ್ಯರ್ಥಿ. ರಾಜ್ಯದಲ್ಲಿ ಕೋವಿಡ್‌ - 19 ಸೋಂಕು ಪ್ರಕರಣ 13 ಮಂದಿಯಲ್ಲಿ ದೃಡಪಟ್ಟಿದ್ದು ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಮುಂಜಾಗರೂಕತಾ ಕ್ರಮವಾಗಿ ರಾಜ್ಯದಲ್ಲಿ ಒಂದು ವಾರಗಳ ಕಾಲ ಜಾರಿಯಲ್ಲಿರುವ ನಿರ್ಬಂಧವನ್ನು ಮುಂದುವರಿಸಲು ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಕೊರೊನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಚಿವ ಸಂಪುಟದ ತುರ್ತು ಸಭೆ ಕರೆದಿದ್ದು ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗರೂಕತಾ ಕ್ರಮಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ.


from India & World News in Kannada | VK Polls https://ift.tt/3dbGzim

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...