ಇಟಲಿಯಲ್ಲಿದ್ದ ಕನ್ನಡಿಗರಿಗೆ ಸಿಕ್ತು ಸ್ಪಂದನೆ, ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದು ಹೀಗೆ

ಬೆಂಗಳೂರು: ಕೊರೊನಾ ಭೀತಿಯಲ್ಲಿ ವಿದೇಶದಲ್ಲಿರುವ ಭಾರತೀಯರ ರಕ್ಷಣೆಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. , ಅರಬ್‌ ಸೇರಿದಂತೆ ವಿದೇಶದಲ್ಲಿರುವ ಭಾರತೀಯರ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರಲ್ಲೂ ಕೊರೊನಾ ಸೋಂಕಿನಿಂದ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿರುವ ಇಟಲಿಯ ಕನ್ನಡಿಗ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರಲಾಗುತ್ತಿದ್ದು, ಸರ್ಕಾರದ ಕ್ರಮಕ್ಕೆ ವಿಡಿಯೋ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. ಇಟಲಿಯಲ್ಲಿ ಕೋವಿಡ್‌ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದ್ದು ಭಾರೀ ಪ್ರಮಾಣದ ಸಾವು ನೋವಿಗೆ ಕಾರಣವಾಗಿದೆ. ಇಟಲಿಯಲ್ಲಿ ಕನ್ನಡಿಗರು ಸೇರಿದಂತೆ ಸಾಕಷ್ಟು ಭಾರತೀಯರು ಇದ್ದಾರೆ. ಕೊರೊನಾದಿಂದ ಜೀವ ಭಯದಲ್ಲಿ ಇರುವ ಭಾರತೀಯರ ರಕ್ಷಣೆ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ವಿಶೇಷ ವಿಮಾನ ಹಾಗೂ ಆರೋಗ್ಯ ಇಲಾಖೆಯ ತಜ್ಞರನ್ನು ಇಟಲಿಗೆ ಕಲುಹಿಸಿಕೊಡಲಾಗಿದೆ. ಅಲ್ಲಿ ಅವರಿಗೆ ವೈದ್ಯಕೀಯ ತಪಾಸಣೆಯನ್ನು ನಡೆಸಿ ಭಾರತಕ್ಕೆ ಕರೆದುಕೊಂಡು ಬರಲಾಗುತ್ತಿದೆ. ಸರ್ಕಾರದ ಸೂಕ್ತ ಸ್ಪಂದನೆಯಿಂದ ಭಾರತಕ್ಕೆ ಹಿಂತಿರುಗಿರುವ ಕನ್ನಡಿಗ ವಿದ್ಯಾರ್ಥಿಗಳು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಆರೋಗ್ಯ ಸಚಿವ ಶ್ರೀರಾಮುಲು “ಬೇರೆ ದೇಶಗಳಿಂದ ಹಿಂದಿರುಗಿದ ನಮ್ಮವರ ಈ ಸಂದೇಶಗಳನ್ನು ನೋಡಿ ಸಮಾಧಾನವಾಯಿತು. ಈ ಹಿಂದೆ ಹೇಳಿದಂತೆ, ನಮ್ಮ ಸರ್ಕಾರ ಕನ್ನಡ ನಾಡಿನ ಹಾಗೂ ಕನ್ನಡಿಗರ ಸೇವೆಗೆ ಸದಾ ಸಿದ್ಧವಿದೆ” ಎಂದಿದ್ದಾರೆ.


from India & World News in Kannada | VK Polls https://ift.tt/2xhKMRr

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...