ಬೆಂಗಳೂರು: ಕೊರೊನಾ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ವ ಪಕ್ಷದ ಸಭೆಯನ್ನು ಕರೆಯಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಕೊರೊನಾ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಇಬ್ಬರು ಸಚಿವರಲ್ಲೇ ಗೊಂದಲವಿದೆ ಎಂದು ಪರೋಕ್ಷವಾಗಿ ಶ್ರೀರಾಮುಲು ಹಾಗೂ ಡಾ. ಕೆ ಸುಧಾಕರ್ ನಡುವಿನ ತಿಕ್ಕಾಟವನ್ನು ಉಲ್ಲೇಖಿಸಿದ ಅವರು, ಗಡಿ ವಿಚಾರ, ನೀರು, ಭೂಮಿ ವಿಚಾರ ಬಂದಾಗ ಸರ್ವಪಕ್ಷದ ಸಭೆ ಕರೆದು ಮಾತಾಡೋದು ವಾಡಿಕೆ ಈ ನಿಟ್ಟಿನಲ್ಲಿ ಎಲ್ಲರ ಸಲಹೆ ಸೂಚನೆಯನ್ನು ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್ವೈ ಮುಂದಾಗಬೇಕು ಎಂದು ಒತ್ತಾಯಿಸಿದರು. ಪೊಲೀಸರು ಮಾಡುತ್ತಿರುವ ಕಾರ್ಯ ಶೈಲಿ ಮಾಧ್ಯಮಗಳಲ್ಲಿ ತೋರಿಸುತ್ತಿದ್ದಾರೆ. ಮನೆಯಿಂದ ಹೊರಗಡೆ ಬಂದವರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಜನರು ಅಂತಹ ಅಪರಾಧ ಏನು ಮಾಡಿದ್ದಾರೋ ಗೊತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಇದೇ ವೇಳೆ ಆರ್ಎಸ್ಎಸ್ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡ ಡಿ.ಕೆ ಶಿವಕುಮಾರ್,ಆರ್ಎಸ್ಎಸ್ ಕಾರ್ಯಕರ್ತರು ಅನುಮತಿ ತೆಗೆದುಕೊಂಡಿದ್ದೇವೆ ಅಂತ ಕಲೆಕ್ಷನ್ ಮಾಡಲು ಹೊರಡಿದ್ದಾರೆ. ಐದು ಕೆ.ಜಿ ಅಕ್ಕಿ, ಉಪ್ಪು, ಅಡುಗೆ ಅಣ್ಣೆ ಕೊಡುತ್ತೇವೆ ಎಂದು ಗಾಡಿಗಳಲ್ಲಿ ಓಡಾಡುತ್ತಿದ್ದಾರೆ. ಇದಕ್ಕೆ ಸಿಎಂ ಅವರು ಅನುಮತಿ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದರು.
from India & World News in Kannada | VK Polls https://ift.tt/2wGwZ6K