ಹೊಸದಿಲ್ಲಿ: ಕಳೆದ 8 ವರ್ಷಗಳಿಂದ ನಿರ್ಭಯಾ ಪ್ರಕರಣದ ಅಪರಾಧಿಗಳು, ಜೈಲಿನಲ್ಲಿ ದುಡಿದ ಹಣವನ್ನು ಆಯಾ ಕುಟುಂಬಗಳಗೆ ನೀಡಲಾಗುವುದು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಈ ಅಪರಾಧಿಗಳು ಎಷ್ಟು ದಿನಗಳ ಕಾಲ ಕೆಲಸ ಮಾಡಿದ್ದರು, ಹಾಗೂ ಎಷ್ಟು ಮೊತ್ತದ ಹಣ ಗಳಿಸಿದ್ದರು ಎಂಬುದನ್ನು ಬಹಿರಂಗಪಡಿಸಿಲ್ಲ. ಸುಮಾರು 8 ವರ್ಷಗಳ ಹಿಂದೆ 23 ವರ್ಷದ ಅರೆ ವೈದ್ಯಕೀಯ ಪದವಿ ವಿದ್ಯಾರ್ಥಿನಿ 'ನಿರ್ಭಯಾ' ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳಿಗೆ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದೆ. ಇದಕ್ಕೆ ಇಡೀ ದೇಶವೇ ಸಂಭ್ರಮಾಚರಣೆ ಮಾಡುತ್ತಿದೆ. ಕೊನೆಗೂ ನಿರ್ಭಯಾಳ ಆತ್ಮಕ್ಕೆ ಶಾಂತಿ ದೊರೆತಿದೆ. ದೇಶದ ಮಹಿಳಾ ಭದ್ರತೆಗೆ ಸಂಬಂಧಿಸಿದಂತೆ ಇದೊಂದು ಐತಿಹಾಸಿಕ ಹೆಜ್ಜೆ ಎಂಬುದಾಗ ನೆಟ್ಟಿಗರು ಬಣ್ಣಿಸುತ್ತಿದ್ದಾರೆ. ಗಲ್ಲಿಗೇರಿಸಲಾದ ನಾಲ್ವರು ಅಪರಾಧಿಗಳು ಮೃತಪಟ್ಟಿರುವುದನ್ನು ವೈದ್ಯರು ದೃಢ ಪಡಿಸಿದರು. ಬಳಿಕ ಮೃತದೇಹಗಳನ್ನು ಆ್ಯಂಬುಲೆನ್ಸ್ ಮೂಲಕ ದೀನ ದಯಾಳ ಉಪಾಧ್ಯಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ''ಗಲ್ಲಿಗೇರಿದ ಅಪರಾಧಿಗಳು ಹಿಂದಿನ ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದರು. ಭಯದಲ್ಲೇ ರಾತ್ರಿಯನ್ನು ಕಳೆದರು. ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು'' ಎಂದು ತಿಹಾರ್ ಜೈಲಿನ ಡಿಜಿ ಮಾಹಿತಿ ನೀಡಿದರು.
from India & World News in Kannada | VK Polls https://ift.tt/2wpOfNv