ನಿರ್ಭಯಾ ಪ್ರಕರಣ ಗೆದ್ದ ಅಡ್ವೊಕೇಟ್ 'ಸೀಮಾ ಕುಷ್ವಾಹ' ಹೇಳಿದ್ದೇನು?

ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನೂ ಶುಕ್ರವಾರ ಬೆಳಗ್ಗೆ 5:30ಕ್ಕೆ ಗಲ್ಲಿಗೇರಿಸಲಾಗಿದ್ದು, ಇಡೀ ದೇಶವೇ ಸಂಭ್ರಮಾಚರಣೆ ಮಾಡುತ್ತಿದೆ. ಕೊನೆಗೂ ನಿರ್ಭಯಾಳ ಆತ್ಮಕ್ಕೆ ಶಾಂತಿ ದೊರೆತಿದೆ. ದೇಶದ ಮಹಿಳಾ ಭದ್ರತೆಗೆ ಸಂಬಂಧಿಸಿದಂತೆ ಇದೊಂದು ಐತಿಹಾಸಿಕ ಹೆಜ್ಜೆ ಎಂಬುದಾಗ ನೆಟ್ಟಿಗರು ಬಣ್ಣಿಸುತ್ತಿದ್ದಾರೆ. ಸುಮಾರು 8 ವರ್ಷಗಳ ಕಾಲ ವಕಾಲತು ವಹಿಸಿ ನಿರ್ಭಯಾಳಿಗೆ ನ್ಯಾಯ ಒದಗಿಸಿಕೊಟ್ಟ ಅಡ್ವೋಕೇಟ್‌ ಸೀಮಾ ಕುಷ್ವಾಹ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ಹೆಣ್ಣು ಮಕ್ಕಳಿಗಾಗಿ ನಾನು ಹೋರಾಡಿದ್ದೇನೆ. ಗಲ್ಲಿಗೇರಿಸಲಾದ ಅಪರಾಧಿಗಳು ನಿರ್ಭಯಾಳ ಇಡೀ ದೇಹವನ್ನು ನಾಶ ಮಾಡಿದ್ದರು. ಅವರಿಗೆ ತಕ್ಕ ಶಿಕ್ಷೆಯಾಗಿದೆ. ಇದರಿಂದ ದೇಶದ ಎಲ್ಲ ಮಹಿಳೆಯರಿಗೆ ಭದ್ರತೆ ದೊರೆಯುವ ಆಶಾಭಾವನೆ ಮೂಡಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಇದೀಗಷ್ಟೆ ಒಂದು ಉದಾಹರಣೆ ಸೃಷ್ಟಿಯಾಗಿದೆ. ಆದರೆ ಇದು ಬಹಳ ಹಿಂದೆಯೇ ಆಗಬೇಕಿತ್ತು. ಈಗ ಜನಗಳಿಗೆ ನಾವು ಶಿಕ್ಷೆಗೆ ಒಳಗಾಗುತ್ತೇವೆ ಎಂಬುದು ಗೊತ್ತಾಗಿದೆ. ನೀನು (ಅಪರಾಧಿ) ದಿನಾಂಕವನ್ನು ಮುಂದೂಡಬಹುದು. ಆದರೆ ಶಿಕ್ಷೆಯನ್ನು ಪಡೆದೇ ತೀರುವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಟ್ವೀಟ್‌ ಮಾಡಿದ್ದಾರೆ. ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿರುವ ಕೆಲವು ದೋಷಗಳಿಂದ ನಿರ್ಭಯಾ ಅಪರಾಧಿಗಳನ್ನು ಸುದೀರ್ಘ ಕಾಲ ಉಳಿಸಿಕೊಳ್ಳಲಾಗಿತ್ತು. ಕೊನೆಗೂ ಅವರನ್ನು ಗಲ್ಲಿಗೇರಿಸಲಾಗಿದೆ ಎಂದು ಕಿರಣ್ ಕಲ್ಯಾಣ್ ಎಂಬುವವರು ಟ್ವೀಟ್ ಮಾಡಿದ್ದಾರೆ. ಇದೊಂದು ಐತಿಹಾಸಿಕ ದಿನ. 7 ವರ್ಷಗಳ ನಂತರ ನಿರ್ಭಯಾಗೆ ನ್ಯಾಯ ಸಿಕ್ಕಿದೆ. ಇವತ್ತು ಆಕೆಯ ಆತ್ಮಕ್ಕೆ ಶಾಂತಿ ಸಿಕ್ಕಿದೆ ಎಂದು ಭಾವಿಸುತ್ತೇನೆ. ಅತ್ಯಾಚಾರ ಎಸಗಿದರೆ ಗಲ್ಲುಶಿಕ್ಷೆಯಾಗುತ್ತದೆ ಎಂಬ ಕಠಿಣ ಸಂದೇಶವನ್ನು ಇಂದು ಭಾರತ ಸಾರಿದೆ ಎಂದು ದಿಲ್ಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್‌ ಟ್ವೀಟ್‌ ಮಾಡಿದ್ದಾರೆ.


from India & World News in Kannada | VK Polls https://ift.tt/2Uml463

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...