ಪಣಜಿ: ಭಯದಲ್ಲಿ ದಿನದೂಡುತ್ತಿರುವ , ಅತ್ಯಂತ ವೇಗವಾಗಿ ಹಬ್ಬುತ್ತಿರುವ ಮಾರಕ ವೈರಸ್ ಕುರಿತು ತಲೆಕೆಡೆಸಿಕೊಂಡಿದೆ. ವೈರಸ್ ಹಬ್ಬುವುದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೀವ್ರ ಕಟ್ಟೆಚ್ಚರವಹಿಸಿವೆ. ಕೊರೊನಾ ವೈರಸ್ ಹಬ್ಬದಂತೆ ತಡೆಗಟ್ಟಲು ಜನಸಾಮಾನ್ಯರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಈಗಾಗಲೇ ಕೇಂದ್ರ ಹಾಗೂ ಎಲ್ಲಾ ರಾಜ್ಯದ ಆರೋಗ್ಯ ಇಲಾಖೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಧ್ಯೆ ಕೊರೊನಾ ವೈರಸ್ ಹಬ್ಬದಂತೆ ತಡೆಗಟ್ಟಲು ಸಲಹೆ ನೀಡಿರುವ ಗೋವಾದ ಬಿಜೆಪಿ ನಾಯಕ , ಭೇಟಿಯ ಸಂದರ್ಭದಲ್ಲಿ ಪರಸ್ಪರ ಕೈ ಮುಗಿದು ಮಾಡುವಂತೆ ಸೂಚಿಸಿದ್ದಾರೆ. ಭೇಟಿಯ ಸಂದರ್ಭದಲ್ಲಿ ಪರಸ್ಪರ ಅಪ್ಪಿಕೊಳ್ಳುವುದು ವಿದೇಶಿ ಸಂಸ್ಕೃತಿಯಾಗಿದ್ದು, ಇದರಿಂದ ಮಾರಕ ಕೊರೊನಾ ವೈರಸ್ ತಗುಲುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ದೇಶೀಯ ಸಂಸ್ಕೃತಿಯಂತೆ ಪರಸ್ಪರ ಕೈ ಮುಗಿದು ನಮಸ್ಕಾರ ಮಾಡುವುದು ಒಳಿತು ಎಂದು ಸಿದ್ಧಾರ್ಥ್ ಸಲಹೆ ನೀಡಿದ್ದಾರೆ. ದೇಶಾದ್ಯಂತ ಕೊರೊನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟಲು ಭಾರತೀಯ ಸಂಸ್ಕೃತಿಯ ಮೊರೆ ಹೋಗಿ ಎಂದು ಸಿದ್ಧಾರ್ಥ್ ಟ್ವೀಟ್ ಮಾಡಿದ್ದಾರೆ. ಪರಸ್ಪರ ಕೈ ಮುಗಿದು ನಮಸ್ಕಾರ ಮಾಡುವುದರಿಂದ ಕೊರೊನಾ ವೈರಸ್ ಹರಡುವಿಕೆಯನ್ನು ತಪ್ಪಿಸಬಹುದು ಎಂದು ಬಿಜೆಪಿ ಮಾಜಿ ಶಾಸಕ ಸಿದ್ಧಾರ್ಥ್ ಅಭಿಪ್ರಾಯಪಟ್ಟಿದ್ದಾರೆ.
from India & World News in Kannada | VK Polls https://ift.tt/2TlHF3f