ಬೆಂಗಳೂರು: ಹೈದರಾಬಾದ್ ಟೆಕ್ಕಿಯ ಬೆಂಗಳೂರಿನ ಸ್ನೇಹಿತ ಸೇರಿದಂತೆ ಮೂರು ಮಂದಿ ಸೋಂಕು ಶಂಕಿತರು ಬೆಂಗಳೂರಿನ ರಾಜೀವ್ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೈದರಾಬಾದ್ನ ಟೆಕ್ಕಿಗೆ ಸೋಂಕು ಇರುವುದು ದೃಢಪಟ್ಟಿದೆ. ಸ್ನೇಹಿತನಿಗೂ ಸೋಂಕು ಇರಬಹುದು ಎಂಬ ಶಂಕೆ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಇರಾನ್ನಿಂದ ರಾಜ್ಯಕ್ಕೆ ಫೆ.26 ರಂದು ಬಂದಿದ್ದ ವ್ಯಕ್ತಿ ಫೆ.28 ರಂದು ತಾವಾಗಿಯೇ ಬಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲಿನ ದ್ರವದ ಪರೀಕ್ಷೆ ಮಾಡಿದ್ದು, ಸೋಂಕು ಇಲ್ಲ ಎಂದು ಖಚಿತವಾಗಿದೆ. ಆದರೂ ಮಾರ್ಗಸೂಚಿ ಪಾಲಿಸಲು ವ್ಯಕ್ತಿಯನ್ನು ಕೆಲ ದಿನಗಳವರೆಗೆ ಆಸ್ಪತ್ರೆಯಲ್ಲೇ ಇರಿಸಬೇಕಿದೆ. ಮತ್ತೊಬ್ಬರು ಮಂಗಳವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಅನುಮಾನ ಹಿನ್ನೆಲೆಯಲ್ಲಿ ರಾಜೀವ್ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಗಂಟಲ ದ್ರವದ ಮಾದರಿಯನ್ನೂ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿಗೆ ಕಾಯಲಾಗುತ್ತಿದೆ.
from India & World News in Kannada | VK Polls https://ift.tt/2uPwzdp