ಬೆಂಗಳೂರಿನ ರೆಸಾರ್ಟ್‌ನಲ್ಲಿರುವ ಕೈ ಶಾಸಕರ ಭೇಟಿಗೆ ಯತ್ನ, ದಿಗ್ವಿಜಯ್ ಸಿಂಗ್ ಪೊಲೀಸರ ವಶಕ್ಕೆ

ಬೆಂಗಳೂರು: ಪಕ್ಷಕ್ಕೆ ಕೈಕೊಟ್ಟು ಬೆಂಗಳೂರಿನ ಯಲಹಂಕದ ರಮಡಾ ರೆಸಾರ್ಟ್‌ನಲ್ಲಿ ಉಳಿದುಕೊಂಡಿರುವ ಶಾಸಕರನ್ನು ಭೇಟಿ ಮಾಡಲು ಯತ್ನಿಸಿದ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್‌ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬುಧವಾರ ಬೆಳಗ್ಗೆ ಮಧ್ಯಪ್ರದೇಶದ ಕಾಂಗ್ರೆಸ್‌ ಮುಖಂಡರ ಜೊತೆಗೆ ಬೆಂಗಳೂರು ಆಗಮಿಸಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಕಾಂಗ್ರೆಸ್ ಶಾಸಕರು ಉಳಿದುಕೊಂಡಿರುವ ರೆಸಾರ್ಟ್‌ಗೆ ಹೋದರು. ನಮ್ಮ ಶಾಸರನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ಪೊಲೀಸರಲ್ಲಿ ಮನವಿ ಮಾಡಿದರು. ಆದರೆ ಪೊಲೀಸರು ಇದಕ್ಕೆ ಅನುಮತಿಯನ್ನು ನಿರಾಕರಿಸಿದರು. ರೆಸಾರ್ಟ್‌ನೊಳಗಡೆ ಉಳಿದುಕೊಂಡಿರುವ ಶಾಸಕರು ಯಾರನ್ನು ಭೇಟಿಯಾಗಲು ಇಷ್ಟಪಡುದಿಲ್ಲ ಎಂದು ಪತ್ರ ನೀಡಿದ್ದಾರೆ ಎಂದರು. ಆದರೆ ಇದಕ್ಕೆ ಒಪ್ಪದ ದಿಗ್ವಿಜಯ್ ಸಿಂಗ್, ಶಾಸಕ ಮನೋಜ್ ಚೌಧರಿ ನಮ್ಮನ್ನು ಭೇಟಿಯಾಗಲು ತಯಾರಿದ್ದು, ಪೊಲೀಸರು ಇದಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದರು. ಅಷ್ಟೇ ಅಲ್ಲದೆ ಅನುಮತಿ ನಿರಾಕರಣೆ ಮಾಡಿದ್ದನ್ನು ವಿರೋಧಿಸಿ ರೆಸಾರ್ಟ್ ಮುಂದೆ ಪ್ರತಿಭಟನೆ ನಡೆಸಿದರು. ದಿಗ್ವಿಜಯ್‌ ಸಿಂಗ್‌ಗೆ ರಾಜ್ಯದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು. ಈ ವೇಳೆ ದಿಗ್ವಿಜಯ್‌ ಸಿಂಗ್ ಅವರನ್ನು ಯಲಹಂಕದ ಅಮೃತಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡರು. ದಿಗ್ವಿಜಯ್ ಸಿಂಗ್‌ಗೆ ಸಾಥ್ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡಾ ಪೊಲೀಸ್‌ ಠಾಣೆಗೆ ತೆರಳಿದರು. ಮಧ್ಯಪ್ರದೇಶದಲ್ಲಿ ಭಾರೀ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಕಮಲ್‌ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನದ ಹಾದಿಯಲ್ಲಿದೆ. ಈಗಾಗಲೇ 21 ಶಾಸಕರು ರಾಜೀನಾಮೆಯನ್ನು ನೀಡಿದ್ದಾರೆ. ಅಲ್ಲದೆ ಪ್ರಭಾವಿ ಮುಖಂಡ ಜೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸರ್ಕಾರವನ್ನು ಉಳಿಸಿಕೊಳ್ಳುವ ಕೊನೆಯ ಹಂತದ ಸರ್ಕಸ್‌ಗೆ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡರು ಮುಂದಾಗಿದ್ದು ಬಂಡಾಯ ಶಾಸಕರನ್ನು ತಮ್ಮತ್ತ ಸೆಳೆಯುವ ಪ್ರಯತ್ನವನ್ನು ನಡೆಸುತ್ತಿದ್ದಾರೆ.


from India & World News in Kannada | VK Polls https://ift.tt/2ISrEf5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...