ಕೊರೊನಾ ಗಾಳಿ ಸುದ್ದಿಗೆ ಕಿವಿಗೊಡಬೇಡಿ, ಜನರಲ್ಲಿ ಸರ್ಕಾರ ಮನವಿ

ಬೆಂಗಳೂರು: ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಜನರಲ್ಲಿ ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಕುರಿತಾಗಿ ಸಾಕಷ್ಟು ಸುಳ್ಳು ಸುದ್ದಿಗಳು ಹಾಗೂ ವದಂತಿಯನ್ನು ಹರಿಯಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಮನವಿ ಮಾಡಿಕೊಂಡಿರುವ ಆರೋಗ್ಯ ಇಲಾಖೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದಿದೆ. ಕೊರೊನಾ ಕುರಿತಾಗಿ ಗಾಳಿ ಸುದ್ದಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಿ ಎಂದು ಕೋರುತ್ತೇನೆ. ನಮ್ಮ ಸರ್ಕಾರ ಹಾಗೂ ಇಲಾಖೆ ಸೋಂಕು ಹರಡದಂತೆ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಕೊರೊನಾ ಮುಂಜಾಗರೂಕತಾ ಕ್ರಮವಾಗಿ ಇದುವರೆಗೆ 40,207 ಪ್ರಯಾಣಿಕರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. 251 ಜನರ ರಕ್ತ ಪರೀಕ್ಷೆ ನಡೆಸಲಾಗಿದ್ದು, 238 ನೆಗೆಟಿವ್ ಎಂದು ವರದಿ ಬಂದಿದೆ. ಉಳಿದ 13 ಜನರ ವರದಿ ಇನ್ನಷ್ಟೇ ಬರಬೇಕಿದೆ ಕೊರೊನಾ ಸೋಂಕಿತ ವ್ಯಕ್ತಿಯ ಬೆಂಗಳೂರಿನ ನಿವಾಸ ಹಾಗೂ ಕಚೇರಿಯನ್ನು ಸೋಂಕು ಹರಡದಂತೆ ನಿನ್ನೆ ಸ್ವಚ್ಛಗೊಳಿಸಲಾಗಿದೆ. ಹಾಗೂ ಆತನ ಕಚೇರಿಯ 25 ಸಹದ್ಯೋಗಿಗಳನ್ನು ಸಂಪರ್ಕಿಸಿ, ಒಬ್ಬರನ್ನು ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ಸೇರಿಸಿ, ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ವಿಮಾನ ನಿಲ್ದಾಣ ಸೇರಿದಂತೆ ಮೆಟ್ರೋ ನಿಲ್ದಾಣಗಳಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕು ಹರಡದಂತೆ ಆರೋಗ್ಯ ಇಲಾಖೆ ಅಗತ್ಯ ಮುಂಜಾಗರೂಕತೆಯನ್ನು ತೆಗೆದುಕೊಂಡಿದೆ. ಹೀಗಿದ್ದರೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಲ್ಲಿ ವದಂತಿಗಳನ್ನು ಹರಡುತ್ತಿದ್ದು ಜನರನ್ನು ಮತ್ತಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.


from India & World News in Kannada | VK Polls https://ift.tt/39l0DMZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...