ಬೆಂಗಳೂರು: ರಾಜ್ಯದಲ್ಲಿ ಮತ್ತಿಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 146 ಕ್ಕೆ ಏರಿಕೆಯಾಗಿದೆ. ದುಬೈ ಪ್ರಯಾಣದ ಹಿನ್ನೆಲೆ ಹೊಂದಿರುವ ದಂಪತಿಯಲ್ಲಿ ಸೋಂಕು ಇರುವುದು ಅಧಿಕೃತಗೊಂಡಿದ್ದು ಕ್ವಾರಂಟೈನ್ನಲ್ಲಿ ಇಡಲಾಗಿದೆ. ಬೆಂಗಳೂರು ಮೂಲದ 68 ವರ್ಷ ಪ್ರಾಯದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದುಬೈಗೆ ಪ್ರಯಾಣ ಮಾಡಿದ್ದ ಇವರು ಮಾರ್ಚ್ 22 ರಂದು ಭಾರತಕ್ಕೆ ಹಿಂದಿರುಗಿಸುತ್ತಾರೆ. ಇವರನ್ನು ತಪಾಸಣೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆಕಾಶ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇವರ ಜೊತೆಗೆ ಇವರ 62 ವರ್ಷದ ಇವರ ಪತ್ನಿಯಲ್ಲೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇವರೂ ಕೂಡಾ ದುಬೈ ಪ್ರವಾಸದ ಹಿನ್ನೆಲೆ ಹೊಂದಿದ್ದಾರೆ. ಮಾರ್ಚ್ 23 ರಂದು ಬೆಂಗಳೂರಿಗೆ ಹಿಂತಿರುಗಿದ್ದರು. ಇವರನ್ನು ಆಕಾಶ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ನಾಲ್ವರು ಮೃತೊಟ್ಟಿದ್ದಾರೆ, ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ 11 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೊರನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿದ್ದು ಮನೆಯಿಂದ ಅನಗತ್ಯವಾಗಿ ಹೊರಬಾರದಂತೆ ಸೂಚಿಸಲಾಗಿದೆ. ಹೀಗಿದ್ದರೂ ಜನರು ಕಟ್ಟುನಿಟ್ಟಿನ ಲಾಕ್ಡೌನ್ ಪಾಲನೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
from India & World News in Kannada | VK Polls https://ift.tt/2wV0Bhb