ಕೇರಳ ಗಡಿ ತೆರವು: ಎಚ್‌.ಡಿ ದೇವೇಗೌಡರ ಪತ್ರಕ್ಕೆ ಬಿಎಸ್‌ವೈ ಕೊಟ್ಟ ಉತ್ತರವೇನು?

ಬೆಂಗಳೂರು: ಕೊರೊನಾ ನಿಯಂತ್ರಣ ಕಾರಣಕ್ಕಾಗಿ ಕರ್ನಾಟಕ ಹಾಗೂ ಕೇರಳದ ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು ಗಡಿ ಪ್ರದೇಶದ ನಿವಾಸಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ನಡೆ ಚರ್ಚೆಗೆ ಗ್ರಾಸವಾಗುತ್ತಿದ್ದು ನ್ಯಾಯಾಲಯದ ಮೆಟ್ಟಿಲನ್ನೇರಿದೆ. ಈ ನಡುವೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಪತ್ರ ಬರೆಯುವ ಮೂಲಕ ತುರ್ತು ಸಂಧರ್ಭದಲ್ಲಿ ಚಿಕಿತ್ಸೆಗಾಗಿ ಬರುವ ಅಂಬ್ಯುಲೆನ್ಸ್‌ಗಳನ್ನು ತಡೆದು ನಿಲ್ಲಿಸುವುದು ಅಮಾನವೀಯವಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು. ದೇವೇಗೌಡರ ಈ ಪತ್ರಕ್ಕೆ ಬಿ.ಎಸ್‌ ಯಡಿಯೂರಪ್ಪ ಉತ್ತರ ನೀಡಿದ್ದಾರೆ. ಕರ್ನಾಟಕದಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಪ್ರಾಣ ರಕ್ಷಣೆ ಸರ್ಕಾರದ ಗುರುತರ ಹೊಣೆಗಾರಿಕೆಯಾಗಿದೆ. ಈ ಹೊಣೆಗಾರಿಕೆಯಿಂದ ಕಿಂಚಿತ್ತೂ ಹಿಂದೆ ಸರಿಯಲು ಸಾಧ್ಯವಿಲ್ಲ. ಕರ್ನಾಟಕ ಮತ್ತು ಕೇರಳ ನಡುವಿನ ಗಡಿಯನ್ನು ಮುಚ್ಚುವ ನಿರ್ಧಾರ ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ. ಗಡಿಭಾಗದ ಆರೋಗ್ಯ ಸಮಸ್ಯೆಯ ಗಂಭೀರ ಅಧ್ಯಯನ ನಡೆಸಿ ಅದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳ ಆಧಾರದ ಮೇಲೆ ಗಡಿಭಾಗವನ್ನು ಮುಚ್ಚುವ ಪ್ರಜ್ಞಾಪೂರಕ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಕೇರಳ ಕಾಸರಗೋಡು ಮತ್ತಿತರ ಭಾಗಗಳಲ್ಲಿ ಕೊರೊನಾ ವೈರಸ್‌ ವ್ಯಾಪಕವಾಗಿ ಹರಡಿರುವ ಅಧಿಕೃತ ಮಾಹಿತಿಗಳು ನಮ್ಮ ಸರ್ಕಾರದ ಬಳಿ ಇವೆ. ಇಂಡಿಯನ್‌ ಮೆಡಿಕಲ್ ಅಸೋಸಿಯೇಷನ್‌ ಮಂಗಳೂರು ಶಾಖೆ ಒದಗಿಸಿರುವ ಅಂಕಿ - ಅಂಶಗಳು ಭಯಾನಕವಾಗಿದೆ. ಅದೇ ರೀತಿ ಕೇರಳ ಸರ್ಕಾರಕ್ಕೂ ಕಾಸರಗೋಡು ಮತ್ತಿತರ ಭಾಗಗಳಲ್ಲಿ ತೀವ್ರವಾಗಿ ಹರಡಿರುವ ಸಮಗ್ರ ಅಂಕಿ- ಅಂಶಗಳಿವೆ. ಮಂಗಳೂರಿಗೆ ಹೊಂದಿರುವ ಕೇರಳದ ಕಾಸರಗೋಡಿನಲ್ಲಿ 106 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಡಿಯನ್‌ ಮೆಡಿಕಲ್ ಅಸೋಸಿಯೇಷನ್‌ ಮತ್ತಿತರ ಆರೋಗ್ಯ ಸಂಸ್ಥೆಗಳು ರಾಜ್ಯದ ಗಡಿಭಾಗವನ್ನು ಕಟ್ಟುನಿಟ್ಟಾದ ದಿಗ್ಭಂಧನಕ್ಕೆ ಒಳಪಡಿಸಬೇಕೆಂದು ಅಭಿಪ್ರಾಯಪಟ್ಟಿದೆ. ಈ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಕರ್ನಾಟಕ ಕೇರಳ ಮುಕ್ತ ಸಂಚಾರಕ್ಕೆ ದಿಗ್ಬಂಧನೆ ಹೇರುವ ನಿರ್ಧಾರವನ್ನು ಕೈಗೊಂಡಿದೆ. ಒಂದು ವೇಳೆ ದಿಗ್ಬಂಧನೆವನ್ನು ತೆರವುಗೊಳಿಸಿದರೆ ರಾಜ್ಯದ ಜನತೆಯ ನೆಮ್ಮದಿ ಶಾಂತಿ ನಾಶವಾಗುತ್ತದೆ. ಮೃತ್ಯುವನ್ನು ನಾವೇ ಆಲಂಗಿಸಿಕೊಂಡ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ದಿಶೆಯಲ್ಲಿ ಕರ್ನಾಟಕದ ಸಾವಿರಾರು ಮುಗ್ದ ಹಾಗೂ ಅಸಹಾಯಕ ಜನರ ಹಿದೃಷ್ಟಿಯಿಂದ ಗಡಿ ದಿಗ್ಬಂಧನ ತೆರವುಗೊಳಿಸಲು ಸಾಧ್ಯವಾಗುದಿಲ್ಲವೆಂಬುವುದು ನಮ್ಮ ಸರ್ಕಾರದ ನಿಲುವಾಗಿದೆ ಎಂದು ಸಿಎಂ ಬಿಎಸ್‌ವೈ ಪತ್ರದಲ್ಲಿ ತಿಳಿಸಿದ್ದಾರೆ. ಕೇರಳದಲ್ಲಿ ಕೊರೊನಾ ಪ್ರಕರಣಗಳು ತೀವ್ರವಾಗಿ ಹರಡುತ್ತಿರುವುದರಿಂದ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ. ಆದರೆ ಕರ್ನಾಟಕ ಸರ್ಕಾರದ ನಡೆಗೆ ಕೇರಳ ಅಸಮಾಧಾನ ವ್ಯಕ್ತಪಡಿಸಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ನಡುವೆ ಕೇರಳ ಗಡಿಭಾಗದಲ್ಲಿ ಆಂಬ್ಯುಲೆನ್ಸ್‌ಗಳಿಗೆ ಅವಕಾಶ ನೀಡಬೇಕು ಎಂದು ಪ್ರಧಾನಿಗೆ ತಿಳಿಸಿ ಕ್ರಮ ಕೈಗೊಳ್ಳುವುದಾಗಿ ಎಚ್‌ಡಿ ದೇವೇಗೌಡರು ಪಿಣರಾಯ್‌ ವಿಜಯನ್‌ ಅವರಿಗೆ ಪತ್ರದ ಬರೆಯುವ ಮೂಲಕ ತಿಳಿಸಿದ್ದರು.


from India & World News in Kannada | VK Polls https://ift.tt/2UZXX1q

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...