
ಬೆಂಗಳೂರು: ಬೆಂಗಳೂರಿನ ಅತ್ತಿಬೆಲೆ ಚೆಕ್ ಪೋಸ್ಟ್ನಲ್ಲಿ ಗುರುವಾರ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅವರು ಅಮಾನತು ಮಾಡಿದ್ದಾರೆ. ಬ್ರೇಕ್ ಇನ್ಸ್ ಪೆಕ್ಟರ್ ಗಳಾದ ಟಿ. ಕೆ ಜಯಣ್ಣ ಹಾಗೂ ಕರಿಯಪ್ಪ ಅಮಾನತುಗೊಂಡ ಸಾರಿಗೆ ಅಧಿಕಾರಿಗಳು ಸೇರಿದಂತೆ ಇವರೊಂದಿಗೆ ಶಾಮೀಲಾಗಿದ್ದ ಮಾಜಿ ಹೋಮ್ ಗಾರ್ಡ್ ವಿವೇಕ್ ಅವರನ್ನು ಚಾಲಕರಿಂದ ಲಂಚ ಪಡೆದ ಹಿನ್ನೆಲೆ ಅಪರ ಪೊಲೀಸ್ ಅಧೀಕ್ಷಕರಾದ ಸಜಿತ್ ಅವರಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅತ್ತಿಬೆಲೆ ಚೆಕ್ಪೋಸ್ಟ್ ಮೂಲಕವಾಗಿ ಬರುತ್ತಿದ್ದ ಹಣ್ಣು ಮತ್ತು ತರಕಾರಿ ವಾಹನಗಳಿಂದ ಇವರು ಲಂಚ ಪಡೆಯುತ್ತಿದ್ದರು. ಅಗತ್ಯ ಸಾಗಾಟ ವಾಹನಗಳಿಗೆ ಸರ್ಕಾರ ಅನುಮತಿ ನೀಡಿದರೂ ಈ ಇಬ್ಬರು ಸಾರಿಗೆ ಅಧಿಕಾರಿಗಳು ವಾಹನ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದರು. ಈ ಕುರಿತಾಗಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡ ಅಧಿಕಾರಿಗಳಾದ ಕರಿಯಪ್ಪ ಅವರಿಂದ ರೂ. 1250, ಜಯಣ್ಣ ಅವರಿಂದ 1100 ರೂಪಾಯಿ ಹಾಗೂ ವಿವೇಕ್ ಅವರಿಂದ ರೂ. 800 ಹಾಗೂ ಚೆಕ್ ಪೋಸ್ಟ್ ಕಚೇರಿಯಲ್ಲಿ ರೂ. 12350 ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಮಾಹಿತಿ ನೀಡಿದ್ದಾರೆ.
from India & World News in Kannada | VK Polls https://ift.tt/2R7aMG8