ಲಕ್ನೋ: ಉತ್ತರ ಪ್ರದೇಶದಲ್ಲಿ ಟೆಸ್ಟಿಂಗ್ ವಿಚಾರದಲ್ಲಿ ಜನರು ಆತಂಕ ವ್ಯಕ್ತಪಡಿಸುವುದನ್ನು ಉಲ್ಲೇಖ ಮಾಡಿರುವ ಪ್ರಧಾನ ಕಾರ್ಯದರ್ಶಿ , ಕೋವಿಡ್ 19 ಟೆಸ್ಟಿಂಗ್ ವಿಚಾರದಲ್ಲಿ ಪಾರದರ್ಶಕತೆ ತರಬೇಕಿದೆ ಎಂದು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಮಾಡಿರುವ ಸಲಹೆಯಲ್ಲಿ ಇದನ್ನು ತಿಳಿಸಿದ್ದಾರೆ. ಕೋವಿಡ್ ವಿರುದ್ಧ ಹೋರಾಟದಲ್ಲಿ ಟೆಸ್ಟಿಂಗ್ ನಿರ್ಣಾಯಕ ಘಟಕವೆನಿಸಿದೆ ಎಂದವರು ತಿಳಿಸಿದರು. ''ಉತ್ತರ ಪ್ರದೇಶದಲ್ಲಿ ಟೆಸ್ಟಿಂಗ್ ವಿಚಾರದಲ್ಲಿ ಅನೇಕ ಮಂದಿ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಪಾರದರ್ಶಕತೆ ಒಂದು ದೊಡ್ಡ ಅಂಶವಾಗಿದೆ. ಸಮಾಜದ ಎಲ್ಲರೂ ಹಾಗೂ ಸರಕಾರ ಒಗ್ಗಟ್ಟಾಗಿ ಮಾತ್ರ ಈ ಸಾಂಕ್ರಾಮಿಕ ರೋಗವನ್ನು ಸೋಲಿಸಬಹುದಾಗಿದೆ. ಈ ಸಂದರ್ಭದಲ್ಲಿ ನನ್ನ ಕೆಲವು ಸಲಹೆಗಳನ್ನು ಹಂಚಿಕೊಳ್ಳುತ್ತಿದ್ದೇನೆ'' ಎಂದು ಟ್ವೀಟ್ ಮಾಡಿದ್ದಾರೆ. ಕಳೆದೆರಡು ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಟೆಸ್ಟಿಂಗ್ ಪ್ರಕಿಯೆ ನಿಲ್ಲಿಸಲಾಗಿದೆ. ಇದರ ಬದಲಾಗಿ ಬೃಹತ್ ಪ್ರಮಾಣದಲ್ಲಿ ಟೆಸ್ಟಿಂಗ್ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಪಾರದರ್ಶಕತೆ ತರಬೇಕಾಗಿದೆ. ಡೇಟಾವನ್ನು ಮರೆಮಾಚುವುದರಿಂದ ಸತ್ಯವು ಮಾರಕವಾಗಿ ಸಾಬೀತಾಗಲಿದೆ ಎಂದು ಎಚ್ಚರಿಸಿದ್ದಾರೆ. ಉತ್ತರ ಪ್ರದೇಶದ ಲ್ಯಾಬ್ಗಳಲ್ಲಿ ದೈನಂದಿನ ಎಷ್ಟು ಟೆಸ್ಟಿಂಗ್ ನಡೆಯುತ್ತಿದೆ ಎಂಬುದರ ಬಗ್ಗೆಯೂ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನೆ ಎತ್ತಿದರು. ಹಾಗೆಯೇ ಸ್ಯಾಂಪಲ್ ಟೆಸ್ಟಿಂಗ್ ಪರೀಕ್ಷೆಯ ವೇಳೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕಿದೆ ಎಂದರು. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಉತ್ತರ ಪ್ರದೇಶದಲ್ಲಿ ಇದುವರೆಗೆ 1621 ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, 25 ಮಂದಿ ಸಾವಿಗೆ ಶರಣಾಗಿದ್ದಾರೆ.
from India & World News in Kannada | VK Polls https://ift.tt/354ZNTi