ಬಿಜೆಪಿಯ ಸಂಸ್ಥಾಪನಾ ದಿನ ಆಚರಿಸಲು, ಕೊರೊನಾ ಸಂಕಷ್ಟವನ್ನು ದುರುಪಯೋಗ ಪಡಿಸಿಕೊಂಡರೇ ಮೋದಿ? ಹೆಚ್ ಡಿಕೆ ಅನುಮಾನ

ಬೆಂಗಳೂರು: ಬಿಜೆಪಿಯು ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ಕೊರೋನಾ ಸಂಕಷ್ಟದ ದಿನಗಳಲ್ಲಿ ಆಚರಿಸಲು ಹಿಂಜರಿದಿರುವ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನರ ಕೈಯಲ್ಲಿ ದೀಪ ಬೆಳಗಿಸುತ್ತಿದೆಯೇ? ಎಂದು ಎಚ್ಡಿಕೆ ಪ್ರಶ್ನಿಸಿದ್ದಾರೆ. ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವುದರಿಂದ 'ಏಪ್ರಿಲ್ 5ರಂದು, ರಾತ್ರಿ 9 ಗಂಟೆಗೆ, ನಿಮ್ಮ 9 ನಿಮಿಷವನ್ನು ನನಗಾಗಿ ಮೀಸಲಿಡಿ. ಮನೆಯ ಎಲ್ಲ ದೀಪಗಳನ್ನು ಬಂದ್ ಮಾಡಿ, ಮನೆ ಬಾಗಿಲಿನಲ್ಲಿ, ಬಾಲ್ಕನಿಯಲ್ಲಿ ಮೊಂಬತ್ತಿ, ದೀಪ, ಟಾರ್ಚ್ ಅಥವಾ ಮೊಬೈಲ್ ಫ್ಲಾಷ್ ಲೈಟ್ 9 ನಿಮಿಷ ಬೆಳಗಿಸಿ' ಎಂದು ಪ್ರಧಾನಿ ನರೇಂದ್ರ ಮೋದಿ ಇಡೀ ದೇಶಕ್ಕೆ ಕರೆ ನೀಡಿದ್ದು, ಈ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಮೋದಿ ವಿರುದ್ದ ಟೀಕಾಪ್ರಹಾರ ನಡೆಸಿದ್ದಾರೆ. ಏಪ್ರಿಲ್ 6ರಂದು ಬಿಜೆಪಿ ಸಂಸ್ಥಾಪನಾ ದಿನ. ಈ ದಿನವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಂಕಷ್ಟವನ್ನು ದುರುಪಯೋಗ ಪಡಿಸಿಕೊಂಡರೇ? 1980ರ ಏ.6ರಂದು ಬಿಜೆಪಿ ಅಸ್ತಿತ್ವಕ್ಕೆ ಬಂದ ದಿನ. ಇಂದಿನ ದಿನ ಬಿಜೆಪಿಗೆ ನಲವತ್ತು ವರ್ಷ ತುಂಬುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. "ತನ್ನ ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ಕೊರೊನಾ ಸಂಕಷ್ಟದ ದಿನಗಳಲ್ಲಿ ನೇರಾ ನೇರ ಆಚರಿಸಲು ಹಿಂಜರಿದ ಬಿಜೆಪಿ, ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ತನ್ನ ಭಂಡತನವನ್ನು ಮೆರೆಯುತ್ತಿದೆಯೇ?" ಎಂಬ ಅನುಮಾನವನ್ನು ಹೊರಹಾಕಿದ್ದಾರೆ. ದೇಶದ ಸಂಕಟವನ್ನು ಬಗೆ ಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ಪ್ರಧಾನಿ ಏಪ್ರಿಲ್ 5 ನ್ನೇ ಆಯ್ದುಕೊಂಡದ್ದಕ್ಕೆ ಬೇರೆ ಏನು ವೈಜ್ಞಾನಿಕ, ವೈಚಾರಿಕ ಕಾರಣ ಎಂಬುದನ್ನು ಸ್ಪಷ್ಟ ಪಡಿಸಬೇಕು. ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿ ಇರುವಾಗ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ತರದ ತೋರಿಕೆಯ ಸಂಭ್ರಮ ಬೇಕೇ? ಎಂದು ಪ್ರಶ್ನಿಸಿದ್ದಾರೆ. ಇಡೀ ಜಗತ್ತು ಕೊರೋನಾ ಮಾರಿಯಿಂದ ತತ್ತರಿಸಿ ಹೋಗಿದೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಮರೆಮಾಚಿ, ಅಕಾಲಿಕ ದೀಪಾವಳಿ ಮಾಡುವುದು ಬೇಕಿತ್ತಾ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಕರುಣಾಳು ಬಾ ಬೆಳಕೆ ಮುಸುಕಿದೀ ಮಬ್ಬಿನಲಿ ಕವಿತೆಯ ಸಾಲುಗಳನ್ನು ಟ್ವಿಟ್ ಮಾಡಿದ್ದಾರೆ.


from India & World News in Kannada | VK Polls https://ift.tt/349AAa1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...