ಸಾಧುಗಳ ಹತ್ಯೆ ಪ್ರಕರಣ: 115ಕ್ಕೇರಿದ ಬಂಧಿತರ ಸಂಖ್ಯೆ, ಸಂಪೂರ್ಣ ವರದಿ ಕೇಳಿದ ಸುಪ್ರೀಂ

ಮುಂಬಯಿ: ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯ ಹಳ್ಳಿಯಲ್ಲಿ ಸಾಧುಗಳನ್ನು ಸಾಮೂಹಿಕವಾಗಿ ಥಳಿಸಿ ಹತ್ಯೆ ಮಾಡಲಾದ ಪ್ರಕರಣ ಸಂಬಂಧ ಮಹಾರಾಷ್ಟ್ರದ ಸಿಐಡಿ ಪೊಲೀಸರು ಶುಕ್ರವಾರ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ 115 ತಲುಪಿದೆ. ಬಂಧಿತ ಆರೋಪಿಗಳನ್ನು ಶುಕ್ರವಾರ ಕೋರ್ಟ್‌ಗೆ ಹಾಜರುಪಡಿಸಿ ಮೇ 13ರವರೆಗೆ ವಿಚಾರಣೆಗಾಗಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಏ.16ರಂದು ಕಾರಿನಲ್ಲಿ ಸೂರತ್‌ಗೆ ತೆರಳುತ್ತಿದ್ದ ಇಬ್ಬರು ಸಾಧುಗಳನ್ನು ಪಾಲ್ಘರ್‌ ಜಿಲ್ಲೆಯ ಗಡಚಿಂಚ್ಲೆ ಗ್ರಾಮದಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಸಾಮೂಹಿಕವಾಗಿ ಥಳಿಸಿ ಹತ್ಯೆ ಮಾಡಲಾಗಿತ್ತು. ಈ ಅಮಾನವೀಯ ಕೃತ್ಯದ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಸರಕಾರ ತನಿಖೆಗೆ ಆದೇಶಿಸಿ ಸಿಐಡಿಗೆ ಹೊಣೆ ಒಪ್ಪಿಸಿತ್ತು. ಥಳಿಸಿದ ಬಳಿಕ ಸಮೀಪದ ಅರಣ್ಯದಲ್ಲಿಅಡಗಿಕೊಂಡಿದ್ದ ಕೆಲವು ಆರೋಪಿಗಳನ್ನು ಡ್ರೋನ್‌ ಬಳಸುವ ಮೂಲಕ ಪೊಲೀಸರು ಪತ್ತೆಹಚ್ಚಿದ್ದಾರೆ. ವರದಿ ಕೇಳಿದ ಸುಪ್ರೀಂ: ಮತ್ತು ಅವರ ಮೇಲಿನ ಸಾಮೂಹಿಕ ಥಳಿತ ಸಂಬಂಧ ರಾಜ್ಯ ಸರಕಾರ ನಡೆಸುತ್ತಿರುವ ತನಿಖೆಯ ಸಂಪೂರ್ಣ ವರದಿಯನ್ನು ನಾಲ್ಕು ವಾರಗಳ ಒಳಗಾಗಿ ಸಲ್ಲಿಸುವಂತೆ ಶುಕ್ರವಾರ ಸುಪ್ರೀಂಕೋರ್ಟ್‌ ಸೂಚಿಸಿದೆ. ಇದೇವೇಳೆ, ತನಿಖೆಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಏ.16ರಂದು ಸಾಧುಗಳ ಮೇಲಿನ ಕ್ರೌರ್ಯದಿಂದ ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ವಿಫಲಗೊಂಡಿರುವುದು ಸ್ಪಷ್ಟವಾಗುತ್ತದೆ, ಪೊಲೀಸರ ವೈಫಲ್ಯ ಎದ್ದು ಕಾಣುತ್ತದೆ ಎಂದು ಸುಪ್ರೀಂಗೆ ಶಶಾಂಕ್‌ ಶೇಖರ್‌ ಝಾ ಎನ್ನುವವರು ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ವೇಳೆ ಶುಕ್ರವಾರ ನ್ಯಾ. ಅಶೋಕ್‌ ಭೂಷಣ್‌ ಮತ್ತು ನ್ಯಾ. ಸಂಜೀವ್‌ ಖನ್ನಾ ಅವರ ದ್ವಿಸದಸ್ಯ ಪೀಠ, ಉದ್ಧವ್‌ ಠಾಕ್ರೆ ನೇತೃತ್ವದ ಸಮ್ಮಿಶ್ರ ಸರಕಾರದಿಂದ ವಿಸ್ತೃತ ವರದಿ ಕೇಳಿದೆ. ಲಾಕ್‌ಡೌನ್‌ ಇದ್ದರೂ ಕೂಡ ಸಾಮೂಹಿಕ ಥಳಿತಕ್ಕೆ ಭಾರಿ ಜನಜಮಾವಣೆಯಾಗಿದ್ದು ನಿರ್ಬಂಧಗಳ ಉಲ್ಲಂಘನೆಯಾಗಿದೆ. ಹಾಗಾಗಿ ಸುಪ್ರೀಂಕೋರ್ಟ್‌ ನೇತೃತ್ವದಲ್ಲಿ ರಚನೆಯಾಗುವ ಎಸ್‌ಐಟಿಯಿಂದಲೇ ಘಟನೆಯ ತನಿಖೆಯಾಗಬೇಕು. ಥಳಿತದ ಸಮಯದಲ್ಲಿಸ್ಥಳದಲ್ಲಿ ಹಾಜರಿದ್ದ ಪೊಲೀಸ್‌ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಕೂಡ ಅರ್ಜಿದಾರರು ಮನವಿ ಮಾಡಿದ್ದಾರೆ.


from India & World News in Kannada | VK Polls https://ift.tt/35mh0HY

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...