ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರು ಮೂರಂಕಿ ಸಂಖ್ಯೆಯಲ್ಲಿ ಹೆಚ್ಚುತ್ತಿದ್ದು, ಇಂದಿ ಒಂದೇ ದಿನ ಸೋಂಕಿತರ ಸಂಖ್ಯೆ ದ್ವಿಶತಕದಂಚಿಗೆ ತಲುಪಿದೆ. ಆರೋಗ್ಯ ಇಲಾಖೆಯ ಶನಿವಾರದ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಂದಿದ್ದು, ರಾಜ್ಯದಲ್ಲಿ 196 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಕಳೆದ ಮಂಗಳವಾರ ರಾಜ್ಯದ್ಯಂತ 149 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ರಾಜ್ಯದಲ್ಲಿ ಒಂದೇ ದಿನ ಅತಿ ಹೆಚ್ಚು ಕೊರೊನಾ ಸೋಂಕು ದರಡಪಟ್ಟಿದ್ದು, ರಾಜ್ಯಕ್ಕೆ ಕೊರೊನಾಘಾತ ಎದುರಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾದಂತಾಗಿದೆ. ಇದುವೆರೆಗೆ ರಾಜ್ಯದಲ್ಲಿ ಕೊರೊನಾ ವೈರಸ್ಗೆ ಒಟ್ಟು 42 ಮಂದಿ ಬಲಿಯಾಗಿದ್ದಾರೆ. ಇದುವರೆಗೆ 598 ಮಂದಿ ಪೂರ್ಣವಾಗಿ ಗುಣವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1297 ಮಂದಿಯಲ್ಲಿ ಸಕ್ರಿಯವಾಗಿದೆ. ಶನಿವಾರ ಕೇವಲು ಒಬ್ಬರು ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಶನಿವಾರ ದೃಢಪಟ್ಟಿರುವ 196 ಪ್ರಕರಣಗಳಲ್ಲಿ ಪೈಕಿ ಬಹುತೇಕರು ಅಂತಾರಾಜ್ಯ ಸಂಪರ್ಕ ಹೊಂದಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬಂದಿರುವವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದು ರಾಜ್ಯದ ಎಲ್ಲೆಡೆ ಆತಂಕಕ್ಕೆ ಕಾರಣವಾಗಿದೆ. ಯಾದಗಿರಿಯಲ್ಲಿ ಒಂದೇ ದಿನ 72 ಕೊರೊನಾ ಪಾಸಿಟಿವ್ ದೃಢವಾಗಿದ್ದು ಮಹಾ ಸ್ಪೋಟವಾಗಿದೆ. ಎಲ್ಲರೂ ಮಹಾರಾಷ್ಟ್ರ ದಿಂದ ವಲಸೆ ಬಂದವರಾಗಿದ್ದಾರೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಇಡಲಾಗಿತ್ತು. ಇದೀಗ ಕೋವಿಡ್ 19 ಆಸ್ಪತ್ರೆ ಗೆ ಶಿಫ್ಟ್ ಮಾಡಲಾಗಿದೆ. ಭಾರಿ ಪ್ರಮಾಣದಲ್ಲಿ ಕೊರನಾ ವೈರಸ್ ವಕ್ಕರಿಸಿರುವ ಪರಿಣಾಮ ಜಿಲ್ಲೆಯ ಜನರ ಜಂಘಾಬಲವೇ ಕುಸಿಯುವಂತಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಶನಿವಾರವೂ 28 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 236ಕ್ಕೇರಿದೆ. ಇದು ಪತ್ತೆಯಾಗಿರುವ ಎಲ್ಲಾ ಸ್ನೇಹಿತರು ಕೂಡ ಮುಂಬೈನಿಂದ ಆಗಮಿಸಿದವರೇ ಆಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಮತ್ತೆ 39 ಜನರಿಗೆ ಕೊರೊನಾ ಸೋಂಕು. ಒಟ್ಟು ಸೋಂಕಿತರ ಸಂಖ್ಯೆ 65 ಕ್ಕೆ ಏರಿಕೆ. ಎಲ್ಲರೂ ಮಹಾರಾಷ್ಟ್ರದಿಂದ ವಾಪಸಾದವರು.
from India & World News in Kannada | VK Polls https://ift.tt/2LPhbmn