ರಾಜ್ಯದಲ್ಲಿ 2 ಸಾವಿರದ ಗಡಿ ದಾಟಿದ ಕೊರೊನಾ..! 97 ಹೊಸ ಪಾಸಿಟಿವ್‌ ಕೇಸ್‌ ಪತ್ತೆ

ಬೆಂಗಳೂರು: ಶನಿವಾರವಷ್ಟೇ ರಾಜ್ಯದಲ್ಲಿ ದ್ವಿಶತಕ ದಾಟಿದ್ದ ಕೊರೊನಾ ಸೋಂಕಿತರ ಸಂಖ್ಯೆ ಭಾನುವಾರ ಸ್ವಲ್ಪ ತಗ್ಗಿದ್ದು, ಮಧ್ಯಾಹ್ನದ ವೇಳೆಗೆ 97 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆಯಲ್ಲಿ 2 ಸಾವಿರ ಗಡಿಯನ್ನು ದಾಟಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್‌ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 2056ಕ್ಕೆ ಏರಿಕೆಯಾಗಿದೆ. ಇನ್ನು, ಇಂದು ಚಿಕ್ಕಬಳ್ಳಾಪುರದಲ್ಲಿ ಹೆಚ್ಚು ಎಂಬಂತೆ 26 ಪಾಸಿಟಿವ್‌ ಪ್ರಕರಣಗಳು ಕಂಡುಬಂದಿವೆ. ಉಡುಪಿಯಲ್ಲಿ 18, ಮಂಡ್ಯದಲ್ಲಿ 15, ಹಾಸನದಲ್ಲಿ 14 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಉಳಿದಂತೆ ಕಲಬರುಗಿ ಹಾಗೂ ಯಾದಗಿರಿಯಲ್ಲಿ ತಲಾ 6, ದಾವಣಗೆರೆಯಲ್ಲಿ 4, ತುಮಕೂರು ಹಾಗೂ ಉತ್ತರ ಕನ್ನಡದಲ್ಲಿ ತಲಾ 2 ಪ್ರಕರಣಗಳ ಕಂಡುಬಂದಿವೆ. ಕೊಡಗು, ವಿಜಯಪುರ, ಧಾರವಾಡ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 1 ಪಾಸಿಟಿವ್‌ ಪ್ರಕರಣ ಕಂಡು ಬಂದಿದೆ. ಇಂದು ಪತ್ತೆಯಾದ 97 ಪಾಸಿಟಿವ್‌ ಪ್ರಕರಣಗಳ ಪೈಕಿ 73 ಜನರು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಹಿಂದಿರುಗಿದ್ದಾರೆ ಎಂಬುದು ತಿಳಿದು ಬಂದಿದೆ. ಚಿಕ್ಕಬಳ್ಳಾಪುರದ 26 ಕೇಸ್‌ಗಳು ಸಹ ಮಹಾರಾಷ್ಟ್ರದ ನಂಟನ್ನು ಹೊಂದಿವೆ. ಇಬ್ಬರು ಆಂಧ್ರ ಪ್ರದೇಶದಿಂದ ಬಂದಿದ್ದು, ಗುಜರಾತ್‌ನಿಂದ ಬಂದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು, 2056 ಸೋಂಕಿತರ ಪೈಕಿ ಇದುವರೆಗೂ 634 ಮಂದಿ ಸಂಪೂರ್ಣ ಗುಣುಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇನ್ನುಳಿದ 1378 ಸೋಂಕಿತರಿಗೆ ಕೋವಿಡ್-19 ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಯವರೆಗೂ ಮಾರಕ ಕೊರೊನಾಗೆ ಒಟ್ಟು 42 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲಾವಾರು ಹೊಸ ಸೋಂಕಿತರ ಸಂಖ್ಯೆ * ಚಿಕ್ಕಬಳ್ಳಾಪುರ - 26 * ಉಡುಪಿ - 18 * ಮಂಡ್ಯ - 15 * ಹಾಸನ - 14 * ಕಲಬುರಗಿ - 6 * ಯಾದಗಿರಿ - 6 * ದಾವಣಗೆರೆ - 4 * ಉತ್ತರ ಕನ್ನಡ - 2 * ತುಮಕೂರು - 2 * ವಿಜಯಪುರ - 1 * ದಕ್ಷಿಣ ಕನ್ನಡ - 1 * ಕೊಡಗು - 1 * ಧಾರವಾಡ - 1


from India & World News in Kannada | VK Polls https://ift.tt/36sLZD2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...