ನವದೆಹಲಿ: ಇಂದು ದೇಶದ ಪ್ರಥಮನ ಪ್ರಧಾನಮಂತ್ರಿ ಪಂಡಿತ್ ಅವರ 56ನೇ . ಈ ಹಿನ್ನೆಲೆಯಲ್ಲಿ ಸೇರಿದಂತೆ ಹಲವು ಗಣ್ಯರು ದೇಶದ ಮೊದಲ ಪ್ರಧಾನಿಗೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹಲಾಲ್ ನೆಹರು ಅವರಿಗೆ ಶ್ರದ್ಧಾಂಜಲಿ ಎಂದು ಹೇಳಿದ್ದಾರೆ. ಇನ್ನು ನೆಹರು ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ದೆಹಲಿಯ ಶಾಂತಿವನದಲ್ಲಿರುವ ನೆಹರುಇ ಸಮಾಧಿಗೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು. ಅದರಂತೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಮಾಜಿ ಉಪ ರಾಷ್ಟ್ರಪತಿ ಡಾ. ಹಮೀದ್ ಹನ್ಸಾರಿ ಸೇರಿದಂತೆ ಇನ್ನೂ ಅನೇಕ ಗಣ್ಯರು ಶಾಂತಿವನಕ್ಕೆ ತೆರಳಿ ನೆಹರು ಸಮಾಧಿಗೆ ಪುಷ್ಪ ನಮನ ಸಲ್ಲಿದ್ದಾರೆ. ಬ್ರಿಟಿಷ್ ಆಡಳಿತದಿಂದ ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಪಂಡಿತ್ ಜವಾರಲಾಲ್ ನೆಹರು, ಸ್ವಾತಂತ್ರ್ಯದ ಬಳಿಕ ದೇಶದ ಪ್ರಥಮ ಪ್ರಧಾನಮಂತ್ರಿಯಾಗಿ ಅಧಿಕಾರವಹಿಸಿಕೊಂಡರು. ನೆಹರು ದೀರ್ಘಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಪಡೆದಿದ್ದಾರೆ.
from India & World News in Kannada | VK Polls https://ift.tt/2zy61jj