ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವಾಣ್‌ಗೆ ತಗುಲಿದ ಕೊರೊನಾ ವೈರಸ್ ಸೋಂಕು!

ಮುಂಬೈ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಅಶೋಕ್ ಚವಣ್ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿದೆ. ಸದ್ಯ ಶಿವಸೇನೆ, ಕಾಂಗ್ರೆಸ್-ಎನ್‌ಸಿಪಿ ಸಮ್ಮಿಶ್ರ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಅವರನ್ನು ಪರೀಕ್ಷೆಗೆ ಗುರಿಪಡಿಸಿದಾಗ ಕೊರೊನಾ ವೈರಸ್ ಫಲಿತಾಂಶ ಬಂದಿದೆ. ಆದರೆ ಅಶೋಕ್ ಚವಾಣ್ ಅವರು ರೋಗ ಲಕ್ಷಣರಹಿತರಾಗಿದ್ದು, ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಆದರೆ ಚವಾಣ್ ಅವರಿಗೆ ಕೊರೊನಾ ಸೋಂಕು ಹೇಗೆ ತಗುಲಿತು ಎಂಬುದು ಇನ್ನೂ ದೃಢಪಟ್ಟಿಲ್ಲ. ಸದ್ಯ ನಾಂದೇಡ್‌ನಲ್ಲಿರುವ ಅಶೋಕ್ ಚವಾಣ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಶೋಕ್ ಚವಾಣ್ ಕೊರೊನಾ ವೈರಸ್ ತಗುಲಿದ ಉದ್ಧವ್ ಠಾಕ್ರೆ ಸಚಿವ ಸಂಪುಟದ ಎರಡನೇ ಸಚಿವರಾಗಿದ್ದಾರೆ. ಈ ಹಿಂದೆ ಜಿತೇಂದ್ರ ಔಹಾದ್ ಅವರಿಗೂ ಮಾರಕ ಕೊರೊನಾ ವೈರಸ್ ಸೋಂಕು ತಗುಲಿತ್ತು. ಆದರೆ ಸೂಕ್ತ ಚಿಕಿತ್ಸೆ ಬಳಿಕ ಔಹಾದ್ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.


from India & World News in Kannada | VK Polls https://ift.tt/2LT4JC9

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...