‘ವಲಸೆ’ ಸಂಕಷ್ಟ, ಕೈ ಕಮಲದ ನಡುವೆ ರಾಜಕೀಯ ಕೆಸರೆರಚಾಟ

ಬೆಂಗಳೂರು: ಕೊರೊನಾ ಲಾಕ್‌ಡೌನ್ ಸಂಕಷ್ಟದಲ್ಲಿ ಉದ್ಯೋಗವಿಲ್ಲದೆ ತಮ್ಮ ಊರುಗಳಿಗೂ ತೆರಳಲಾಗದೆ ಪರದಾಡುತ್ತಿದ್ದರೆ ಕಾಂಗ್ರೆಸ್‌ ಹಾಗೂ ಬಿಜೆಪಿ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿಕೊಂಡಿದೆ. ವಲಸೆ ಕಾರ್ಮಿಕರ ಬವಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ರಾಜಕೀಯ ಪಕ್ಷಗಳ ನಡುವೆ ವಾಗ್ದಾದಕ್ಕೂ ಇದು ವೇದಿಕೆ ಕಲ್ಪಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅವಕಾಶ ಕಲ್ಪಿಸಿ ಎಂದು ಅಂಗಲಾಚಿದರು. ವಲಸೆ ಕಾರ್ಮಿಕರಿಗೆ ಉಚಿತ ರೈಲು ಪ್ರಯಾಣಕ್ಕೆ ಅಕಾಶವನ್ನು ಸರ್ಕಾರ ಕಲ್ಪಿಸಿದೆ. ಆದರೆ ಕೆಲವೊಂದು ಗೊಂದಲಗಳು ಇನ್ನೂ ಹಾಗೆ ಇವೆ. ಸಾಕಷ್ಟು ಸಂಖ್ಯೆಯಲ್ಲಿ ಕಾರ್ಮಿಕರು ತಮ್ಮ ಊರುಗಳಿಗೆ ಪ್ರಯಾಣ ಮಾಡಲು ಮುಂದಾಗಿರುವುದರಿಂದ ರೈಲುಗಳ ಕೊರತೆಯೂ ಇದೆ. ಸೇವಾಸಿಂಧು ಆಪ್‌ನಲ್ಲಿ ನೋಂದಣಿ ಆಗದ ಕಾರ್ಮಿಕರು ತಮ್ಮ ಊರುಗಳಿಗೆ ತೆರಳು ಮುಂದಾಗಿರುವುದರಿಂದ ಮತ್ತಷ್ಟು ಗೊಂದಲ ಸೃಷ್ಟಿಗೆ ಕಾರಣವಾಗಿದೆ. ಇದೇ ಸಂದರ್ಭವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಸ್ಥಳಕ್ಕೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೆಪಿಸಿಸಿಯಿಂದ ತಕ್ಷಣದಲ್ಲಿಯೇ ಎಲ್ಲರ ರೈಲ್ವೆ ಪ್ರಯಾಣ ವೆಚ್ಚ ಭರಿಸಲು ಸಿದ್ಧರಿದ್ದೇವೆ. ದಯವಿಟ್ಟು ಅವರನ್ನು ಅವರ ರಾಜ್ಯಕ್ಕೆ ಕಳುಹಿಸಿಕೊಡಿ, ಇಲ್ಲವೇ ನಮಗೆ ಅವಕಾಶ ಮಾಡಿಕೊಡಿ. ಅವರಿಗೆ ಊಟದ ವ್ಯವಸ್ಥೆ ಮಾಡಿ, ಪ್ರಯಾಣದ ವೆಚ್ಚವನ್ನೂ ಭರಿಸಿ ಕಳುಹಿಸಿಕೊಡುತ್ತೇನೆ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿರುವ ಬಿಜೆಪಿ “ಮಾಜಿ ಪಿಎಂಗಳಾದ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಸೂಪರ್ ಪಿಎಂ ಸೋನಿಯಾ ಗಾಂಧಿ ತಮ್ಮ ಆಡಳಿತದ ಅವಧಿಯಲ್ಲಿ ಭಾರತಕ್ಕಾಗಿ ಕೆಲಸ ಮಾಡಿದ್ದರೆ ಈ ವಲಸೆ ಕಾರ್ಮಿಕರು 2020 ರಲ್ಲಿ ಕೆಲಸಕ್ಕಾಗಿ ಹೆಣಗಾಡುತ್ತಿರಲಿಲ್ಲ” ಎಂದು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್‌ ನಡೆಯನ್ನು ತರಾಟೆಗೆ ತೆಗೆದುಕೊಂಡಿದೆ. ಇದಕ್ಕೆ ಪ್ರತ್ಯುತ್ತರ ನೀಡಿರುವ ಕಾಂಗ್ರೆಸ್ “ಏಸಿ ರೂಮುಗಳಲ್ಲಿ ಕುಳಿತು ಅಧಿಕಾರದ ಮದವೇರಿಸಿಕೊಂಡು ಸದಾ ಪ್ರಚಾರ ಪ್ರವಾಸ ಚುನಾವಣೆಗಳಲ್ಲಿ ಮಗ್ನರಾಗಿರುವ ಬಿಜೆಪಿ ನಾಯಕರೇ ಬವಣೆಯಲ್ಲಿ ಬಳಲಿರುವ ಬಡವರ ರೈತರ ಕಾರ್ಮಿಕರ ಸಂಕಷ್ಟಕ್ಕೆ ರಸ್ತೆಗಿಳಿದು ಸ್ಪಂದಿಸಿರಿ.ಲಾಕ್ ಡೌನ್, ಪೂರ್ವ ಯೋಜನೆಗಳನ್ನು ರೂಪಿಸದೆ ಮಾಡಿದ ಧೃತರಾಷ್ಟ್ರ ನಿರ್ಧಾರ” ಎಂದು ಟೀಕಿಸಿದೆ. ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿದೆ ಎಂದು ಹೇಳುತ್ತಿದ್ದರೂ ಕಾರ್ಮಿಕರ ಬವಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ರಾಜಕೀಯ ಬದಿಗಿಟ್ಟು ಸಮಸ್ಯೆ ಪರಿಹಾರಕ್ಕೆ ನೈಜ್ಯ ಪ್ರಯತ್ನ ನಡೆಸಬೇಕಿದೆ.


from India & World News in Kannada | VK Polls https://ift.tt/2ZvvGnf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...