ಧೋನಿ ಜೊತೆಗಿನ ಬಿರಿಯಾನಿ ಕಥೆ ಬಿಡಿಸಿ ಹೇಳಿದ ಮೊಹಮ್ಮದ್‌ ಕೈಫ್!

ಹೊಸದಿಲ್ಲಿ: ಟೀಮ್‌ ಇಂಡಿಯಾಗೆ ಪದಾರ್ಪಣೆ ಮಾಡಿದ ಸಂದರ್ಭದಲ್ಲಿ ಮೊಹಮ್ಮದ್‌ ಕೈಫ್‌ ತಮ್ಮ ವೃತ್ತಿ ಬದುಕಿನ ಶ್ರೇಷ್ಠ ಲಯದಲ್ಲಿದ್ದರು. ಅಷ್ಟೇ ಅಲ್ಲದೆ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟ್ಸ್‌ಮನ್‌ ಹಾಗೂ ತಂಡ ಶ್ರೇಷ್ಠ ಫೀಲ್ಡರ್‌ ಎನಿಸಿಕೊಂಡಿದ್ದರು. ಆದರೆ, ಭಾರತ ತಂಡದಲ್ಲಿ ಕೈಫ್‌ ವೃತ್ತಿಬದುಕು ಬಹುಕಾಲ ಸಾಗಲೇ ಇಲ್ಲ. 2006ರ ಬಳಿಕ ತಂಡದಿಂದ ಹೊರ ಬಿದ್ದ ಬಲಗೈ ಬ್ಯಾಟ್ಸ್‌ಮನ್‌, ಬಳಿಕ ತಂಡಕ್ಕೆ ಕಮ್‌ಬ್ಯಾಕ್‌ ಮಾಡಲು ಸಾಧ್ಯವಾಗಲೇ ಇಲ್ಲ. 2002ರಲ್ಲಿ ಇಂಗ್ಲೆಂಡ್‌ ವಿರುದ್ಧ ಅವರದ್ದೇ ನೆಲದಲ್ಲಿ ಭಾರತ ತಂಡಕ್ಕೆ ನ್ಯಾಟ್‌ವೆಸ್ಟ್‌ ಏಕದಿನ ಕ್ರಿಕೆಟ್‌ ಸರಣಿಯನ್ನು ಗೆದ್ದುಕೊಟ್ಟ ಹೀರೊ ಕೈಫ್ 2018ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿಬಿಟ್ಟರು. ಒಂದು ಕಾಲದಲ್ಲಿ ಭಾರತ ತಂಡದ ಮ್ಯಾಚ್‌ ವಿನ್ನರ್‌ ಆಗಿದ್ದ ಕೈಫ್‌, ಮರಳಿ ಕಮ್‌ಬ್ಯಾಕ್‌ ಮಾಡಲಿಲ್ಲವೇಕೆ? ಎಂಬುದು ಹಲವರನ್ನು ಕಾಡಿದ ಪ್ರಶ್ನೆಯಾಗಿದೆ. ಅಂದಹಾಗೆ ಇದಕ್ಕೆ ಅತ್ಯಂತ ತಮಾಷೆಯ ಕಾರಣವೊಂದನ್ನು ಕೈಫ್‌ ಇತ್ತೀಚಿನ ಇನ್‌ಸ್ಟಾಗ್ರಾಮ್‌ ಲೈವ್‌ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ರಂಜಾನ್‌ ದಿನದಂದು ಭಾರತ ತಂಡವನ್ನು ತಮ್ಮ ಮನಗೆ ಔತಣಕ್ಕೆಂದು ಮೊದಲ ಬಾರಿ ಆಹ್ವಾನಿಸಿದ ಘಟನೆಯನ್ನು ಸ್ಮರಿಸಿರುವ ಕೈಫ್‌, ಈ ಸಂದರ್ಭದಲ್ಲಿ ತಮ್ಮನ್ನು ಸರಿಯಾಗಿ ಸತ್ಕಾರ ಮಾಡದೇ ಇರುವುದಕ್ಕೆ ಧೋನಿ ಬೇಸರ ವ್ಯಕ್ತ ಪಡಿಸಿದ್ದರು ಎಂಬ ಸಂಗತಿಯನ್ನು ಬಹಿರಂಗ ಪಡಿಸಿದ್ದಾರೆ. ಇದೇ ಕಾರಣಕ್ಕೆ ನನಗೆ ಭಾರತ ತಂಡಕ್ಕೆ ಮರಳಿ ಕಮ್‌ಬ್ಯಾಕ್‌ ಮಾಡಲು ಸಾಧ್ಯವಾಗಲೇ ಇಲ್ಲ ಎಂದು ತಮಾಷೆ ಕೂಡ ಮಾಡಿದ್ದಾರೆ. "2006ರಲ್ಲಿ ನೊಯ್ಡಾದಲ್ಲಿ ಇದ್ದ ನಮ್ಮ ಮನೆಗೆ ಭಾರತ ತಂಡವನ್ನು ಆಹ್ವಾನಿಸಿದ್ದೆ. ಗ್ರೇಗ್‌ ಚಾಪೆಲ್, ಸೌರವ್‌ ಗಂಗೂಲಿ ಎಲ್ಲರನ್ನೂ ಆಹ್ವಾನಿಸಿದ್ದೆ. ದೊಡ್ಡ ಆಟಗಾರರೆಲ್ಲಾ ಬಂದಿದ್ದ ಕಾರಣ ಕೊಂಚ ತಡವರಿಸುತ್ತಿದ್ದೆ. ಸಚಿನ್‌ ಮತ್ತು ಇತರ ದಿಗ್ಗಜರ ಆರೈಕೆಯಲ್ಲಿ ತೊಡಗಿದ್ದೆ," ಎಂದು ತಮ್ಮ ನೆನಪಿನಾಳ ಕೆದಕಿದ್ದಾರೆ. ಆ ಸಂದರ್ಭದಲ್ಲಿ ಭಾರತ ತಂಡದ ಕಿರಿಯ ಆಟಗಾರರಾದ ಎಂಎಸ್‌ ಧೋನಿ, ಸುರೇಶ್‌ ರೈನಾ ಸೇರಿದಂತೆ ಮೊದಲಾದ ಆಟಗಾರರು ಪ್ರತ್ಯೇಕ ಕೊಠಡಿಯೊಂದರಲ್ಲಿ ಉಳಿದಿದ್ದರು. ಆಗ ಅವರತ್ತ ಹೆಚ್ಚು ಗಮನ ನೀಡದೇ ಇರುವುದಕ್ಕೆ ಧೋನಿ ತಮಾಷೆಯಿಂದ ದೂರು ಹೇಳಿದ್ದರು. ಅಂದು ಧೋನಿಗೆ ಸರಿಯಾಗಿ ಬಿರಿಯಾನಿ ಬಡಿಸೇ ಇದ್ದ ಕಾರಣಕ್ಕೆ 2007ರಲ್ಲಿ ಧೋನಿ ನಾಯಕನಾದ ನಂತರ ನನಗೆ ಕಮ್‌ಬ್ಯಾಕ್‌ ಮಾಡುವ ಅವಕಾಶ ಸಿಗಲೇ ಇಲ್ಲ ಎಂದು ಕೈಫ್‌ ತಮಾಷೆ ಮಾಡಿದ್ದಾರೆ. "ಧೋನಿ, ರೈನಾ ಮತ್ತು ಉಳಿದ ಕಿರಿಯ ಆಟಗಾರರು ಒಂದು ಕೊಠಡಿಯಲ್ಲಿ ಇದ್ದರೆ, ಸಚಿನ್, ಗಂಗೂಲಿ ಮತ್ತು ಮೊದಲಾದ ಸ್ಟಾರ್‌ಗಳು ಒಂದು ಕೊಠಡಿಯಲ್ಲಿ ಇದ್ದರು. ನಾನು ಬಹುತೇಕ ಸಮಯವನ್ನು ಹಿರಿಯ ಆಟಗಾರರ ಜೊತೆ ಕಳೆದಿದ್ದೆ. ಹೀಗಾಗಿ ಕಿರಿಯ ಆಟಗಾರರ ಕಡೆಗೆ ಗಮನ ನೀಡಲಾಗಲಿಲ್ಲ. ಇದರಿಂದ ಎಂಎಸ್‌ ಬೇಸರ ಮಾಡಿಕೊಂಡಿದ್ದರು. ಬಹುಶಃ ಇದೇ ಕಾರಣಕ್ಕೆ ನನಗೆ ಕಮ್‌ಬ್ಯಾಕ್‌ ಮಾಡುವ ಅವಕಾಶ ಸಿಗಲಿಲ್ಲ ಅನ್ನಿಸುತ್ತದೆ. ಧೋನಿ ಈಗಲೂ ಕೂಡ ಆ ಸಮಯವನ್ನು ನೆನೆದು ದೂರು ಹೇಳುತ್ತಾರೆ.," ಎಂದಿದ್ದಾರೆ. 2007ರಲ್ಲಿ ಧೋನಿ ಭಾರತ ಟಿ20 ಕ್ರಿಕೆಟ್‌ ತಂಡದ ನಾಯಕನಾಗಿ ಕ್ರಮೇಣ ಎಲ್ಲ ಮಾದರಿಯ ನಾಯಕತ್ವ ವಹಿಸಿಕೊಂಡರು. ಮೊಹಮ್ಮದ್‌ ಕೈಫ್‌ ಹೇಳಿದ ಬಿರಿಯಾನಿ ಕಥೆಯ ಸಂಪೂರ್ಣ ವಿಡಿಯೋ ಇಲ್ಲಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/36uYqyc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...