ಬೆಂಗಳೂರು: ಕೊರನಾ ವೈರಸ್ ಲಾಕ್ಡೌನ್ ಬಿಕ್ಕಟ್ಟಿನ ನಡುವೆಯೂ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ ಮಾಡುವುದು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಶುಕ್ರವಾರ ಮುಖ್ಯಮಂತ್ರಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಪ್ರಸ್ತುತ ಲಾಕ್ಡೌನ್ ಸಂದರ್ಭದಲ್ಲಿ ಹಣಕಾಸು ಸಮಸ್ಯೆ ಇದ್ದರೂ ವಿದ್ಯಾರ್ಥಿಗಳಿಗೆ ವಿತರಣೆಯನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದ್ದಾರೆ. ಮುಂದಿನ ಶೈಕ್ಷಣಿಕ ಸಾಲಿನ ಎಲ್ಲ ಅರ್ಹ ವಿದ್ಯಾರ್ಥಿಗಳಿಗೂ ಸೈಕಲ್ ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಖಾಸಗಿ ಶಾಲೆ ಶುಲ್ಕ, ಶಿಕ್ಷಕರ ವೇತನದ ಬಗ್ಗೆಯೂ ಸರ್ಕಾರದ ಸೂಚನೆ ನೀಡಿದೆ. ಶಿಕ್ಷಕರ ಕೊರತೆ ನೀಗಿಸಲು ಕ್ರಮ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಗಣಿತ, ವಿಜ್ಞಾನ ಶಿಕ್ಷಕರ ಕೊರತೆ ನೀಗಿಸಲು ಬಿ.ಎಡ್. ಮಾಡಿರುವ ಇಂಜಿನಿಯರಿಂಗ್ ಪದವೀಧರರ ನೇಮಕಾತಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿಯೂ ಶಿಕ್ಷಣದ ಗುಣಮಟ್ಟ ಹೆಚ್ಚಾಗಲಿದೆ ಎಂಬ ಆಶಯ ಸಭೆಯಲ್ಲಿ ವ್ಯಕ್ತವಾಗಿದೆ.
from India & World News in Kannada | VK Polls https://ift.tt/2Zw7y3V