ಸಾರ್ವಭೌಮತ್ವಕ್ಕೆ ಧಕ್ಕೆ ಬರಗೊಡುವುದಿಲ್ಲ: ಪ್ರಧಾನಿ ಸಭೆಯಲ್ಲಿ ಒಮ್ಮತದ ನಿರ್ಧಾರ!

ನವದೆಹಲಿ: ಲಡಾಖ್ ಗಡಿಯಲ್ಲಿ ಚೀನಿ ಸೈನಿಕರ ಉಪಟಳ ಮತ್ತು ಸೈನ್ಯ ಬಲವರ್ಧನೆ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ರಕ್ಷಣಾ ಪಡೆಗಳ ಮುಖ್ಯಸ್ಥರ ಸಭೆ ನಡೆದಿದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮೂರೂ , ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹಾಗೂ ಸಿಡಿಎಸ್ ಬಿಪಿನ್ ರಾವತ್ ಹಾಜರಿದ್ದರು. ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಪ್ರಮುಖರು, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ಬರಗೊಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಗಲ್ವಾನ್ ನದಿಪಾತ್ರದ ಚೀನಿ ಗಡಿಯ ಸಮೀಪ ಹೊಸ ಏರ್‌ ಬೇಸ್ ನಿರ್ಮಾಣ ಮಾಡುತ್ತಿರುವ ಚೀನಾ, ಮತ್ತಷ್ಟು ಆಕ್ರಮಣಕಾರಿ ನೀತಿಗಳನ್ನು ಅನುಸರಿಸಲಿದೆ ಎಂಬ ಅನುಮಾನ ಮೂಡಿದೆ. ಈ ಹಿನ್ನೆಲೆಯಲ್ಲಿ ಗಡಿ ಸುರಕ್ಷತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮೋದಿ ಈ ವೇಳೆ ರಕ್ಷಣಾ ಪಡೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ ಭೂಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ, ಗಡಿಯಲ್ಲಿ ಸೈನ್ಯವನ್ನು ಬಲವರ್ಧನೆಗೊಳಿಸಲಾಗಿದ್ದು, ಚೀನಿ ಸೈನಿಕರ ಚಲನವಲಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ ಎಂದು ಹೇಳಿದರು ಎನ್ನಲಾಗಿದೆ. ಗಡಿಯಲ್ಲಿ ಚೀನಾದ ಯಾವುದೇ ಆಕ್ರಮಣಕಾರಿ ಚಟುವಟಿಕೆಗಳನ್ನು ಎದುರಿಸಲು ಭಾರತೀಯ ಸೇನೆ ಸಂಪೂರ್ಣ ಸಜ್ಜಾಗಿದೆ ಎಂದೂ ಈ ವೇಳೆ ಜನರಲ್ ನರವಣೆ ಭರವಸೆ ನೀಡಿದ್ದಾರೆ. ಇದಕ್ಕೂ ಮೊದಲು ಪ್ರಧಾಣಿ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಅವರೊಂದಿಗೂ ಮಹತ್ವದ ಸಭೆ ನಡೆಸಿದ್ದರು.


from India & World News in Kannada | VK Polls https://ift.tt/2X3U51w

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...