ಕೊರೊನಾ ಪರಿಹಾರ ಪ್ಯಾಕೇಜ್‌ನಿಂದ ಯಾರಿಗೂ ನ್ಯಾಯ ಸಿಕ್ಕಿಲ್ಲ, ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟವನ್ನು ಅನುಭವಿಸುತ್ತಿರುವ ವಿವಿಧ ವರ್ಗಗಳಿಗೆ ರಾಜ್ಯ ಸರ್ಕಾರ 1610 ಕೋಟಿ ವಿಶೇಷ ಪ್ಯಾಕೇಜ್ ಬಿಡುಗಡೆಗೊಳಿಸಿದರೂ ಯಾರಿಗೂ ಅದು ತಲುಪಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಲಾಕ್‌ಡೌನ್‌ನಿಂದಾಗಿ ಸಾಂಪ್ರದಾಯಿಕ ಉದ್ಯೀಗಸ್ಥರು ಹಾಗೂ ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ವಿವಿಧ ವರ್ಗಗಳು ಸಂಕಷ್ಟದಲ್ಲಿದೆ. ಇವರಿಗೆ ಕನಿಷ್ಠ 10,000 ಪರಿಹಾರವನ್ನು ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಸರ್ಕಾರ 5000 ಪರಿಹಾರ ನೀಡಿದರೂ ಅದರು ಫಲಾನುಭವಿಗಳಿಗೆ ತಲುಪಿಲ್ಲ. ಪರಿಹಾರ ನೀಡಲು ಅಧಿಕಾರಿಗಳು ಹಲವಾರು ದಾಖಲೆ ಕೇಳುತ್ತಿದ್ದಾರೆ. ಈ ದಾಖಲೆಗಳನ್ನು ನೀಡಲು ಚಾಲಕರಿಗೆ ಸಾಧ್ಯವಾಗುತ್ತಿಲ್ಲ. ಅಷ್ಟೇ ಅಲ್ಲದೆ ಪರಿಹಾರ ಧನವನ್ನು ವಿತರಿಸಲು ಅಧಿಕಾರಿಗಳ ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿದರು. ಸರ್ಕಾರದಿಂದ ಸಂಕಷ್ಟದಲ್ಲಿರುವ ಸಾಂಪ್ರದಾಯಿಕ ವೃತ್ತಿ ಸಮಾಜಕ್ಕೆ ದೊಡ್ಡ ಅನ್ಯಾಯವಾಗಿದೆ. ಆಟೋ, ಕ್ಯಾಬ್‌ ಡ್ರೈವರ್‌ಗಳಿಗೂ ಅಧಿಕಾರಿಗಳು ದಾಖಲೆಯ ಹೆಸರಿನಲ್ಲಿ ಪರಿಹಾರ ನೀಡದೆ ಹಿಂಸೆ ನೀಡುತ್ತಿದ್ದಾರೆ. ಸರ್ಕಾರ ಕೇವಲ ಆಶ್ವಾಸನೆ ನೀಡಿ ಸುಮ್ಮನಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


from India & World News in Kannada | VK Polls https://ift.tt/3cYEHsZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...