ಬೆಂಗಳೂರು: ಜನರ ಹಿತ ಕಾಯುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಕಿಡಿಕಾರಿದ್ದಾರೆ. ಸರಣಿ ಟ್ವೀಟ್ಗಳ ಮೂಲಕ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಲಾಕ್ಡೌನ್ನಿಂದಾಗಿ ರಾಜ್ಯದ ರೈತರು, ಬಡವರು, ಕಾರ್ಮಿಕರು, ವಲಸಿಗರು ಇನ್ನಿಲ್ಲದ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.ರೈತರು ಬೆಳೆದ ಹಣ್ಣು, ತರಕಾರಿ ಖರೀದಿಗೆ ಸರ್ಕಾರ ಸೂಕ್ತ ಕ್ರಮ ವಹಿಸಲಿಲ್ಲ.ಜನರ ಹಿತ ಕಾಯುವಲ್ಲಿ ಸಿಎಂ ಬಿಎಸ್ವೈ ಹಾಗೂ ಅವರ ನೇತೃತ್ವದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು. ನಾನು ಅಧ್ಯಕ್ಷನಾದ ಮೂರೇ ದಿನದಲ್ಲಿ ಕೊರೊನಾ ಬಿಕ್ಕಟ್ಟು ಎದುರಾಯಿತು. ಎಲ್ಲಾ ಕ್ಷೇತ್ರಗಳ ಮೇಲೆ ವ್ಯಾಪಕ ಪರಿಣಾಮ ಬೀರಿತು.ತರಕಾರಿ, ಹಣ್ಣು ಬೆಳೆಗಾರರು ಕಣ್ಣೀರಿಟ್ಟರು, ಸರ್ಕಾರ, ಅಧಿಕಾರಿಗಳು ಸ್ಪಂದಿಸಲಿಲ್ಲ.ಹಾಗಾಗಿ ಕಾಂಗ್ರೆಸ್ ಪಕ್ಷವೇ ₹ 100 ಕೋಟಿಗೂ ಹೆಚ್ಚು ಮೌಲ್ಯದ ಬೆಳೆಯನ್ನು ರೈತರಿಂದ ನೇರವಾಗಿ ಖರೀದಿಸಿದೆ ಎಂದಿದ್ದಾರೆ. ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಯಾವುದೂ ಇಲ್ಲ. ರಾಜ್ಯದಲ್ಲಿ 50 ಲಕ್ಷ ಅಧಿಕೃತ ಅಸಂಘಟಿತ ಕಾರ್ಮಿಕರಿದ್ದಾರೆ,ಆದರೆ 3 ಲಕ್ಷ ಮಂದಿಗೆ ಕಿಟ್ ಕೊಟ್ಟಿದ್ದಾರೆ.ಸಾಕಷ್ಟು ಸಮಸ್ಯೆಗಳಿಗೆ ನಾನೇ ಖುದ್ದು ಪರಿಹಾರಕ್ಕೆ ಮುಂದಾಗಿದ್ದೇನೆ. ನನ್ನ ಜೀವ ಇರುವ ವರೆಗೂ ಬಡವರ ಪರ ನಿಲ್ಲುತ್ತೇನೆ ಎಂದು ಟ್ವೀಟ್ ಮೂಲಕ ಟೀಕಾ ಪ್ರಹಾರ ನಡೆಸಿದ್ದಾರೆ.
from India & World News in Kannada | VK Polls https://ift.tt/3cZqxaR