ಬೆಂಗಳೂರು: ರಾಜ್ಯ ಕೊರೊನಾ ಸಂಕಷ್ಟದಲ್ಲಿರವ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿ ಮಠಾಧೀಶರು ಧನ ಸಹಾಯ ನೀಡಿದ್ದಾರೆ. ಮಂಗಳವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಸ್ವಾಮೀಜಿಗಳು ಪರಿಹಾರ ನಿಧಿಗೆ ಚೆಕ್ ಹಸ್ತಾಂತರ ಮಾಡಿದರು. ಕೂಡಲ ಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಇಮ್ಮಡಿ ಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿಎಸ್ವೈ ಅವರನ್ನು ಭೇಟಿ ಮಾಡಿ ಕೋವಿಡ್ 19 ಪರಿಹಾರ ನಿಧಿಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಠಾಧೀಶರುಗಳ ಜೊತೆಗೆ ಸಿಎಂ ಬಿಎಸ್ ಯಡಿಯೂರಪ್ಪ ಕೆಲಹೊತ್ತು ಚರ್ಚೆ ನಡೆಸಿದರು. ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಏರಿಕೆಯಾಗುತ್ತಿದ್ದು ಲಾಕ್ಡೌನ್ನಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸಿಎಂ ಪರಿಹಾರ ನಿಧಿಗೆ ಧನ ಸಹಾಯ ಮಾಡಬೇಕು ಎಂದು ಬಿಎಸ್ವೈ ಮನವಿ ಮಾಡಿಕೊಂಡಿದ್ದರು. ಉದ್ಯಮಿಗಳು, ರಾಜಕಾರಣಿಗಳು, ಶಾಸಕರು, ಸಚಿವರು ಹಾಗೂ ಜನಸಾಮಾನ್ಯರು ಕೂಡಾ ಪರಿಹಾರ ನಿಧಿಗೆ ತಮ್ಮ ಕೈಲಾದ ಹಣವನ್ನು ನೀಡಿದ್ದಾರೆ. ಇದೀಗ ಸ್ವಾಮೀಜಿಗಳು ಕೂಡಾ ತಮ್ಮಿಂದ ಸಾಧ್ಯವಾಗ ಹಣ ಸಹಾಯವನ್ನು ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದ್ದಾರೆ.
from India & World News in Kannada | VK Polls https://ift.tt/2X1UuBP