ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಬಿ.ಕೆ ಹರಿಪ್ರಸಾದ್ ಹಾಗೂ ನಝೀರ್ ಅಹಮ್ಮದ್ ನಾಮಪತ್ರವನ್ನು ಸಲ್ಲಿಸಿದರು. ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಗಳೂ ಆಗಿರುವ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ . ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ಬಿಕೆ ಹರಿಪ್ರಸಾದ್ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ನಝೀರ್ ಅಹಮ್ಮದ್ ಅವರು ಕೂಡಾ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಯು.ಟಿ.ಖಾದರ್, ಶಾಸಕರಾದ ಹ್ಯಾರೀಸ್ ಸಾಥ್ ನೀಡಿದರು. ಜೂನ್ 29 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ನಲ್ಲಿ ಸಾಕಷ್ಟು ಪೈಪೋಟಿ ಇತ್ತು. ಸುಮಾರು 270 ಮಂದಿ ಅಕಾಂಕ್ಷಿಗಳು ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದರು. ಕೊನೆಗೂ ಹೈಕಮಾಂಡ್ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಆದರೆ ಬಿ.ಕೆ ಹರಿಪ್ರಸಾದ್ ಆಯ್ಕೆ ಪಕ್ಷದಲ್ಲಿ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯವಾಗಿದ್ದ ಆಯ್ಕೆ ಮಾಡಿರುವುದು ಹಲವಾರು ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಹಿಂದುಳಿದ ವರ್ಗದ ನಾಯಕರಾಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಚೆಕ್ಮೇಟ್ ನೀಡುವುದೇ ವರಿಷ್ಠರ ಈ ನಡೆಗೆ ಕಾರಣ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
from India & World News in Kannada | VK Polls https://ift.tt/2Yd5ywq