ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಹಾಪ್ಕಾಮ್ಸ್ ನೌಕರರ ವಿರುದ್ಧ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದ 550 ಹಾಪ್ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು . ಮಳಿಗೆ ತೆರೆಯದೇ ಇರುವವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಸಿಎಂ ಸೂಚಿಸಿದರು. ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹುತೇಕ ಇಲ್ಲವಾಗಿದೆ. ಹೊಸ ಕೊಳವೆಬಾವಿಗಳನ್ನು ಕೊರೆಯಲು ಅನುಮತಿ ನೀಡಬಾರದು. ಒಂದು ತಿಂಗಳ ನಂತರ ಪರಿಸ್ಥಿತಿಯನ್ನು ಪರಿಶೀಲಿಸಿ ತೀರ್ಮಾನಿಸಬಹುದು ಎಂದು ಅಧಿಕಾರಿಗಳಿಗೆ ಯಡಿಯೂರಪ್ಪ ತಿಳಿಸಿದರು.
from India & World News in Kannada | VK Polls https://ift.tt/2ZXUHYr