ಮೌನಾಚರಣೆ ಮೂಲಕ ಆರಂಭವಾದ ಮೋದಿ ಸಭೆ: ಕೊರೊನಾ ಗೆಲ್ಲುವ ಪಣ!

ನವದೆಹಲಿ: ಮಾರಕ ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಎರಡನೇ ಸುತ್ತಿನ ಮೂಲಕ ಮಾತುಕತೆ ನಡೆಸಿದ್ದಾರೆ. ನಿನ್ನೆ(ಜೂನ್ 16)ಯೂ ದೇಶದ 21 ರಾಜ್ಯಗಳ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ್ದ ಪ್ರಧಾನಿ ಮೋದಿ, ಇಂದೂ(ಬುಧವಾರ)ಕೂಡ 15 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದರು. ಸಭೆ ಆರಂಭಕ್ಕೂ ಮುನ್ನ ಭಾರತ-ಚೀನಾ ಸೈನಿಕರ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಎಲ್ಲರೂ ಎದ್ದು ನಿಂತು ಒಂದು ನಿಮಿಷ ಮೌನಾಚರಣೆ ಆಚರಿಸಿದರು. ಇಂದಿನ ಸಭೆಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ವೈರಸ್ ಹಾವಳಿ ನಿಯಂತ್ರಿಸಲು ಈ ರಾಜ್ಯ ಸರ್ಕಾರಗಳು ಕೈಗೊಂಡಿರುವ ಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ದೇಶದಲ್ಲಿ ಕೊರೊನಾ ವೈರಸ್ ಹಾವಳಿ ವಿರುದ್ಧದ ಹೋರಾಟ ಮುಂದುವರೆದಿದ್ದು, ನಾವವೆಲ್ಲಾ ಒಟ್ಟಾಗಿ ಈ ಯುದ್ಧದಲ್ಲಿ ಜಯ ಸಾಧಿಸಲಿದ್ದೇವೆ ಎಂದು ಪ್ರಧಾನಿ ಮೋದಿ ಭರವಸೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳೊಂದಿಗಿನ ಪ್ರಧಾನಿ ಮೋದಿ ವಿಡಿಯೋ ಸಂವಾದದ ಪ್ರಮುಖ ಅಂಶಗಳು:
  • ಗಡಿ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ.
  • ನೆರೆಯ ದೇಶಗಳೊಂದಿಗೆ ಭಾರತ ಶಾಂತಿ ಬಯಸುತ್ತದೆ. ಆದರೆ ಸಾರ್ವಭೌಮತೆಗೆ ಧಕ್ಕೆ ಬಂದರೆ ಖಂಡಿತ ಸಹಿಸುವುದಿಲ್ಲ.
  • ದೇಶಕ್ಕಾಗಿ ಪ್ರಾಣ ಅರ್ಪಿಸಿದ ವೀರ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಮೋದಿ ಭರವಸೆ.
  • 15 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕರೊನಾ ವೈರಸ್ ನಿಯಂತ್ರಿಸಲು ಕೈಗೊಂಡ ಕ್ರಮಗಳ ಕುರಿತು ಪ್ರಧಾನಿ ಚರ್ಚೆ.
  • ದೇಶ ಒಂದಾಗಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಜಯ ಸಾಧಿಸಲು ಸಿದ್ಧ.
  • ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ರಾಜ್ಯಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಾಣು ಹಾವಳಿಯನ್ನು ನಿಯಂತ್ರಣಕ್ಕೆ ತರಬೇಕು.
ಹೀಗೆ 15 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಕೊರೊನಾ ವೈರಸ್ ಹಾವಳಿ ಹಾಗೂ ಅದರ ನಿಯಂತ್ರಣದ ಕುರಿತು ಮಹತ್ವದ ಸಲಹೆ ನೀಡಿದರು.


from India & World News in Kannada | VK Polls https://ift.tt/30PiASx

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...