ರಾಜ್ಯಸಭಾ ಚುನಾವಣೆ: ದೇವೇಗೌಡರ ಸ್ಪರ್ಧೆಗೆ ಕೆ.ಎಚ್‌ ಮುನಿಯಪ್ಪ ಬೆಂಬಲ

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಕಾವು ತೀವ್ರಗೊಂಡಿದ್ದು ಜೆಡಿಎಸ್‌ನಿಂದ ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಮುಂಚೂನಿಯಲ್ಲಿದೆ. ಸದ್ಯದ ರಾಜಕೀಯ ಸನ್ನಿವೇಶದಲ್ಲಿ ಈ ಇಬ್ಬರು ಹಿರಿಯ ನಾಯಕರನ್ನು ರಾಜ್ಯಸಭೆಗೆ ಆಯ್ಕೆ ಮಾಡಬೇಕು ಎಂಬ ಅಭಿಪ್ರಾಯಗಳು ಕಾಂಗ್ರೆಸ್‌, ಜೆಡಿಎಸ್ ವಲಯದಲ್ಲಿ ಕೇಳಿಬರುತ್ತಿದೆ. ಇದೀಗ ಮಾಜಿ ಸಂಸದ ಕೆ.ಎಚ್‌ ಮುನಿಯಪ್ಪ ಅವರು ಎಚ್‌ಡಿ ದೇವೇಗೌಡರ ಸ್ಪರ್ಧೆಗೆ ಬೆಂಬಲ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೆ.ಎಚ್‌ ಮುನಿಯಪ್ಪ, ಎಚ್‌ಡಿ ದೇವೇಗೌಡರಿಗೆ ನಮ್ಮ ಹೈಕಮಾಂಡ್ ಅವಕಾಶ ಕೊಡಬೇಕು ಎನ್ನುವ ಮೂಲಕ, ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲದ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅದೇ ರೀತಿಯಲ್ಲಿ ಮಲ್ಲಿಕಾರ್ಜುನ ಖರ್ಗೆಗೂ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಖರ್ಗೆ ದಲಿತ ಸಮುದಾಯದ ಪ್ರಶ್ನಾತೀತ ನಾಯಕರು. ಅವರಿಗೆ ಟಿಕೆಟ್ ನೀಡೋಕೆ ಯಾರಾದ್ರೂ ವಿರೋಧ ಮಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಎಚ್‌ಡಿಡಿ ಹಾಗೂ ಖರ್ಗೆ ಇಬ್ಬರು ಹಿರಿಯ ನಾಯಕರು. ಅವರಿಬ್ಬರು ರಾಜ್ಯಸಭೆಯಲ್ಲಿ ಇದ್ದರೆ ಉತ್ತಮ ಎಂದಿದ್ದಾರೆ. ರಾಜ್ಯ ಸಭಾ ಚುನಾವಣೆಯಲ್ಲಿ ದೇವೇಗೌಡರು ಸ್ಪರ್ಧೆ ಮಾಡಬೇಕು ಎಂಬ ಒತ್ತಡ ಜೆಡಿಎಸ್‌ನಲ್ಲಿ ಕೇಳಿಬರುತ್ತಿದೆ. ಆದರೆ ಇದಕ್ಕೆ ಕಾಂಗ್ರೆಸ್ ಸಹಕಾರದ ಅಗತ್ಯವಿದೆ. ಸದ್ಯ ಯಾವಿದೇ ನಿರ್ಧಾರವನ್ನು ಎರಡು ಪಕ್ಷಗಳು ಮುಖಂಡರು ತೆಗೆದುಕೊಂಡಿಲ್ಲ.


from India & World News in Kannada | VK Polls https://ift.tt/3cpWPuR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...