ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಪುನರಾರಂಭ ಮಾಡುವ ಯೋಚನೆ ಬೇಡ ಎಂದು ವಿರೋಧ ಪಕ್ಷದ ನಾಯಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ಗಳ ಮೂಲಕ ಸರ್ಕಾರದ ನಿಲುವನ್ನು ವಿರೋಧಿಸಿದ ಅವರು, ವಿದೇಶಗಳಲ್ಲಿ ಶಾಲೆಗಳ ಪುನರಾರಂಭದ ನಂತರ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ವರದಿಯಾಗಿದೆ ಎಂದು ಉಲ್ಲೇಖಿಸಿದ್ದಾರೆ. ಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ವರದಿಯಾಗುತ್ತಿವೆ.ಈ ನಿಟ್ಟಿನಲ್ಲಿ ಎರಡು ತಿಂಗಳ ನಂತರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಶಾಲೆಗಳ ಪುನರಾರಂಭದ ಬಗ್ಗೆ ಯೋಚನೆ ಮಾಡುವುದು ಸೂಕ್ತ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಶಾಲೆಗಳನ್ನು ಜುಲೈ ತಿಂಗಳಲ್ಲಿ ಪುನರಾರಂಭಿಸುವ ಪ್ರಸ್ತಾವವನ್ನು ಶಿಕ್ಷಣ ಸಚಿವ ಸುರೇಶ್ ಮುಂದಿಟ್ಟಿದ್ದಾರೆ. ಇದರಿಂದ ಆತಂಕಕ್ಕೀಡಾಗಿರುವ ಪೋಷಕರು ಪ್ರಸ್ತಾವವನ್ನು ವಿರೋಧಿಸುತ್ತಿರುವುದನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ಗಮನಿಸಬೇಕು. ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತ ಅಲ್ಲ. ಈ ವಿಚಾರವಾಗಿ ಬಿಎಸ್ವೈ ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವಸರದ ತೀರ್ಮಾನ ಮಾಡಬಾರದು ಎಂದಿದ್ದಾರೆ.
from India & World News in Kannada | VK Polls https://ift.tt/2A204LD