ರಾಜ್ಯಸಭೆ ಚುನಾವಣೆ: ದೇವೇಗೌಡರ ಸ್ಪರ್ಧೆ ಶುಕ್ರವಾರ ನಿರ್ಧಾರ!

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಕಾವು ಜೋರಾಗುತ್ತಿದೆ. ಜೆಡಿಎಸ್‌ನಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಸ್ಪರ್ಧೆ ಕುರಿತಾಗಿ ಶುಕ್ರವಾರ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದು ಸಭೆಯಲ್ಲಿ ಈ ಕುರಿತಾಗಿ ಅಂತಿಮ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಜೂನ್‌ 19 ರಂದು ಚುನಾವಣೆ ನಡೆಯಲಿದ್ದು ಜೆಡಿಎಸ್ನ ಕುಪೇಂದ್ರ ರೆಡ್ಡಿ ಸ್ಥಾನಕ್ಕೆ ಎಚ್‌ಡಿ ದೇವೇಗೌಡರ ಆಯ್ಕೆ ಬಗ್ಗೆ ಜೆಡಿಎಸ್‌ನಲ್ಲಿ ಒಲವು ವ್ಯಕ್ತವಾಗುತ್ತಿದೆ. ಈಗಾಗಲೇ ಶಾಸಕರ ತಂಡ ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸದ್ಯದ ದೇಶದ ರಾಜಕೀಯ ಪರಿಸ್ಥಿತಿಯಲ್ಲಿ ದೇವೇಗೌಡರ ಆಯ್ಕೆ ಅಗತ್ಯ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ದೇವೇಗೌಡರು ರಾಜ್ಯಸಭೆಗೆ ಆಯ್ಕೆಯಾಗಬೇಕಾದರೆ ಕಾಂಗ್ರೆಸ್ ಹೆಚ್ಚುವರಿ ಮತಗಳ ಅಗತ್ಯವಿದೆ. ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗಲು 45 ಮತಗಳ ಅಗತ್ಯವಿದೆ. ಕಾಂಗ್ರೆಸ್ ಬಳಿ 68 ಮತಗಳಿದ್ದು ಹೆಚ್ಚುವರಿ ಮತಗಳನ್ನು ಜೆಡಿಎಸ್‌ಗೆ ನೀಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಹೊಂದಾಣಿಕೆ ಮಾತುಕತೆಯೂ ತೆರೆಮರೆಯಲ್ಲಿ ನಡೆದಿದೆ. ವಿಧಾನಪರಿಷತ್‌ಗೆ ಜೆಡಿಎಸ್‌ ಕಾಂಗ್ರೆಸ್ ಬೆಂಬಲ ನೀಡಿದರೆ ರಾಜ್ಯಸಭೆಗೆ ತನ್ನ ಹೆಚ್ಚುವರಿ ಮತಗಳನ್ನು ದೇಗೇಗೌಡರಿಗೆ ನೀಡುವ ಕುರಿತಾಗಿಯೂ ಚರ್ಚೆಗಳು ನಡೆಯುತ್ತಿವೆ. ಆದರೆ ಅಂತಿಮ ನಿರ್ಧಾರ ಇನ್ನೂ ಕೈಗೊಂಡಿಲ್ಲ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು. ದೇವೇಗೌಡರ ಸ್ಪರ್ಧೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಲವು ವ್ಯಕ್ತಪಡಿಸಿದ್ದಾರೆ. ಆದರೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಿರ್ಧಾರ ಅಂತಿಮವಾಗಲಿದೆ. ಪರಿಷತ್‌ ಚುನಾವಣೆಯಲ್ಲಿ ಹೊಂದಾಣಿಕೆ ಮಾಡುವುದಾದರೆ ರಾಜ್ಯಸಭೆಯಲ್ಲಿ ಜೆಡಿಎಸ್‌ಗೆ ಹೆಚ್ಚುವರಿ ಮತಗಳನ್ನು ನೀಡಲು ಸಿದ್ದರಾಮಯ್ಯ ಸಮ್ಮತಿಯೂ ಇದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಶುಕ್ರವಾರ ನಡೆಯಲಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ಶಾಸಕರ ಹಾಗೂ ಪ್ರಮುಖರ ಜೊತೆಗೆ ಚರ್ಚೆ ನಡೆಸಿ ದೇವೇಗೌಡರ ಸ್ಪರ್ಧೆ ಕುರಿತಾಗಿ ಅಂತಿಮ ನಿರ್ಧಾರಕ್ಕೆ ಪಕ್ಷ ಬರಲಿದೆ ಎಂದು ತಿಳಿದುಬಂದಿದೆ.


from India & World News in Kannada | VK Polls https://ift.tt/3ePjX7x

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...