ಮೇಲ್ಮನೆ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು, ಎಂಟಿಬಿ ಮುಖದಲ್ಲಿ ಮೂಡಿದ ನಗು!

ಬೆಂಗಳೂರು: ಮೇಲ್ಮನೆ ಚುನಾವಣೆಗೆ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದರು. ಅಭ್ಯರ್ಥಿಗಳಾದ ಸುನೀಲ್‌ ವಲ್ಯಾಪುರೆ, ಎಮ್.ಟಿ.ಬಿ.ನಾಗರಾಜ್, ಆರ್.ಶಂಕರ್ ಹಾಗೂ ಪ್ರತಾಪ್ ಸಿಂಹ ನಾಯಕ್ ಅವರು ನಾಮಪತ್ರ ಸಲ್ಲಿಸಿದರು. ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಗೆ ಸಾಕಷ್ಟು ಗೊಂದಲವಿತ್ತು. ವಲಸೆ ಬಂದ ಎಂಟಿಬಿ ನಾಗರಾಜ್‌, ಆರ್.ಶಂಕರ್‌ ಹಾಗೂ ಎಚ್‌.ವಿಶ್ವನಾಥ್ ಅವರಿಗೆ ಟಿಕೆಟ್‌ ನೀಡಬೇಕು ಎಂಬ ಒತ್ತಡಗಳು ಇದ್ದವು. ಆದರೆ ಕೊನೆಯ ಗಳಿಗೆಯಲ್ಲಿ ವಲಸೆ ಬಂದ ಎಂಟಿಬಿ ನಾಗರಾಜ್‌ ಹಾಗೂ ಆರ್. ಶಂಕರ್‌ ಅವರಿಗೆ ಟಿಕೆಟ್‌ ಸಿಕ್ಕಿದೆ. ಇನ್ನೆರಡು ಸ್ಥಾನಗಳು ಮೂಲ ಬಿಜೆಪಿಗರ ಪಾಲಾಗಿದೆ. ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಎಂಟಿಬಿ ಉಪ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ರಾಜಕೀಯ ಭವಿಷ್ಯವೂ ಅತಂತ್ರವಾಗಿತ್ತು. ಪರಿಷತ್‌ ಟಿಕೆಟ್‌ ಸಿಗುತ್ತಾ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಪಕ್ಷದಲ್ಲಿ ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಕೊನೆಗೂ ಎಂಟಿಬಿ ನಾಗರಾಜ್‌ ಅವರಿಗೆ ಟಿಕೆಟ್ ಸಿಕ್ಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಇದರಿಂದ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಅವರ ಮುಖದಲ್ಲಿ ನಗು ಮೂಡಿತ್ತು. ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟಿಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ ಹಾಗೂ ಶಾಸಕರಾದ ಅರವಿಂದ ಲಿಂಬಾವಳಿ ಅವರು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/2YFUyGY

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...