ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವೊಂದು ಬಿಗಿ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಅದರಲ್ಲೂ ನಗರದಲ್ಲಿ ಸೋಂಕು ಹೆಚ್ಚಾಗುತ್ತಿರುವ ಆತಂಕ ಸೃಷ್ಟಿಸಿದೆ. ಇದಕ್ಕಾಗಿ ನಾಗರಿಕರ ಸಹಾಯವನ್ನು ಸರ್ಕಾರ ನಿರೀಕ್ಷೆ ಮಾಡಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿಯಿಂದ ನಾಗರಿಕ ಕ್ವಾಟಂಟೈನ್ ಸ್ಕ್ವಾಡ್ ಆರಂಭವಾಗಿಲಿದೆ. ಏನಿದು ನಾಗರಿಕ ಕ್ವಾರಂಟೈನ್ ಸ್ಕ್ವಾಡ್ ಕೊರೊನಾ ನಿಯಂತ್ರಣ ಮಾಡುವಲ್ಲಿ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ನಾಗರಿಕ ಸಹಕಾರವೂ ಅತೀ ಅಗತ್ಯವಾಗಿದೆ. ಸೋಂಕು ಹರಡದಂತೆ ತಡೆಗಟ್ಟಲು ಹೋಂ ಕ್ವಾರಂಟೈನ್ ಬಿಗಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಇದರ ಮೇಲ್ವಿಚಾರನೆ ನೋಡಿಕೊಳ್ಳಲು ಸ್ವಯಂಸೇವಕರ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ, ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸುವಂತೆ ಬಿಬಿಎಂಪಿ ಬೆಂಗಳೂರಿನ ನಾಗರಿಕರಲ್ಲಿ ಮನವಿ ಮಾಡಿಕೊಂಡಿದೆ. ಇದಕ್ಕೆ ನಾಗರಿಕ ಕ್ವಾರಂಟೈನ್ ಸ್ಕ್ವಾಡ್ ಎಂದು ಹೆಸರು ನೀಡಲಾಗಿದೆ. ಸ್ಕ್ವಾಡ್ ಸದಸ್ಯರಾಗುವುದು ಹೇಗೆ ? ಈ ವಿಚಾರವನ್ನು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಸರ್ಕಾರದ ಜೊತೆಗೆ ಕೈಜೋಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ನಾಗರಿಕ ಸ್ಕ್ವಾಡ್ ಸದಸ್ಯರು ಕೊರೊನಾ ಸೋಂಕಿತರಾಗಿ ಹೋಂ ಕ್ವಾರಂಟೈನ್ನಲ್ಲಿರುವ ಜನರ ಮೇಲ್ವಿಚಾರಣೆಯನ್ನು ನೋಡಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಆಸಕ್ತರು ಈ ಲಿಂಕ್ನಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬಹುದಾಗಿದೆ.
from India & World News in Kannada | VK Polls https://ift.tt/3dBfCnf