ಬೆಂಗಳೂರು: ಭಾರಿ ಕುತೂಹಲ ಕೆರಳಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೊನೆಗೂ ಜಲಸಂಪನ್ಮೂಲ ಖಾತೆ ಮಂತ್ರಿ ಪಾಲಾಗಿದೆ. ಜಿಲ್ಲಾ ಉಸ್ತುವಾರಿಯನ್ನು ಕೆ. ಗೋಪಾಲಯ್ಯ ಅವರಿಗೆ ನೀಡಲಾಗಿದೆ. ಇಲ್ಲಿಯವರೆಗೆ ಜಗದೀಶ್ ಶೆಟ್ಟರ್ ಬೆಳಗಾವಿ ಸಚಿವರಾಗಿದ್ದರು. ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಜಿಲ್ಲೆಯಲ್ಲಿ ನಾಲ್ಕು ಜನ ಸಚಿವರಿದ್ದರೂ ಹೊರ ಜಿಲ್ಲೆಯವರಿಗೆ ಉಸ್ತುವಾರಿ ಹೊಣೆ ನೀಡಲಾಗಿತ್ತು. ಈ ಹಿಂದೆ ಉಸ್ತುವಾರಿ ಜಿಲ್ಲೆಗಳ ಹಂಚಿಕೆ ವೇಳೆ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಗಾಗಿ ಪಟ್ಟು ಹಿಡಿದಿದ್ದರು ಎಂದು ವರದಿಯಾಗಿತ್ತು. ಸವದಿ ಮತ್ತು ಜಾರಕಿಹೊಳಿ ಇಬ್ಬರ ನಡುವೆಯೂ ಈ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿತ್ತು. ಕೊನೆಗೆ ಈ ಉಸಾಬರಿಯೇ ಬೇಡ ಎಂದು ಸಿಎಂ ಯಡಿಯೂರಪ್ಪ ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಆ ಹುದ್ದೆ ನೀಡಿದ್ದರು. ಆದರೆ ನಂತರ ಜಾರಕಿಹೊಳಿ, 'ನನಗೀಗ ಇಷ್ಟು ದೊಡ್ಡ ಜಿಲ್ಲೆಯ ಉಸ್ತುವಾರಿ ಬೇಡ. ಜಗದೀಶ್ ಶೆಟ್ಟರ್ ಅವರೇ ಮುಂದುವರಿಯಲಿ ಎಂದು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ' ಎಂದು ತೇಪೆ ಹಚ್ಚಿದ್ದರು. ಜೊತೆಗೆ ಚುನಾವಣೆಗೆ ಒಂದು ವರ್ಷ ಇರುವಾಗ ನಾನು ಜಿಲ್ಲೆಯ ಉಸ್ತುವಾರಿಯನ್ನು ವಹಿಸುಕೊಳ್ಳುತ್ತೇನೆ ಎಂದು ತಿಳಿಸಿದ್ದರು. ಆದರೆ ಚುನಾವಣೆಗೆ ಇನ್ನೂ ಮೂರು ವರ್ಷ ಇರುವಾಗಲೇ ಅವರೀಗ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ.
ಇನ್ನು ವಿವಾದಗಳ ಮೂಲಕ ಸುದ್ದಿಯಲ್ಲಿರುವ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಕೈಯಲ್ಲಿದ್ದ ಹಾಸನ ಜಿಲ್ಲೆಯ ಉಸ್ತುವಾರಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರಿಗೆ ನೀಡಲಾಗಿದೆ.
from India & World News in Kannada | VK Polls https://ift.tt/3dr2D8v