ಚೆನ್ನೈ: ವೈಯಕ್ತಿಕ ಟ್ವೀಟ್ ಮಾಡಿ ಮ್ಯಾನೇಜ್ಮೆಂಟ್ ಅವಕೃಪೆಗೆ ಒಳಗಾದ ಕಾರಣಕ್ಕೆ ತಂಡ ತನ್ನ ಟೀಮ್ ಡಾಕ್ಟರ್ ಅವರನ್ನು ಕಿತ್ತೊಗೆದಿದೆ ಮಧು, ತಮ್ಮ ವೈಯಕ್ತಿಕ ಟ್ವಿಟರ್ ಖಾತೆಯಲ್ಲಿ ಮಂಗಳವಾರ ಟ್ವೀಟ್ ಒಂದನ್ನು ಮಾಡಿದ್ದರು. ಅದರಲ್ಲಿ "ಶವದ ಪೆಟ್ಟಿಗೆಗಳು ಪಿಎಮ್ ಕೇರ್ಸ್ ಸ್ಟಿಕ್ಕರ್ ನೊಂದಿಗೆ ಹಿಂದಿರುಗುತ್ತದೆಯೇ ಎಂಬ ಕುತೂಹಲ ಮೂಡಿದೆ," ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ವೀಟ್ ಮೂಲಕ ಅಣಕಿಸಿದ್ದರು. ಇದಕ್ಕೆ ಪ್ರತಿಯಾಗಿ ಟ್ವೀಟ್ ಒಂದನ್ನು ಚೆನ್ನೈ ಸೂಪರ್ ಕಿಂಗ್ಸ್ ಮಾಡಿದ್ದು, "ಡಾ. ಮಧು ಅವರ ವೈಯಕ್ತಿಕ ಟ್ವೀಟ್ ಬಗ್ಗೆ ನಮಗೆ ಗೊತ್ತಿರಲಿಲ್ಲ. ಅವರನ್ನು ತಂಡದ ಡಾಕ್ಟರ್ ಹುದ್ದೆಯಿಂದ ತೆಗೆದುಹಾಕಲಾಗಿದೆ. ಇದೊಂದು ಕೆಟ್ಟ ಅಭಿರುಚಿಯ ಟ್ವೀಟ್ ಆಗಿದ್ದು, ಟೀಮ್ ಮ್ಯಾನೇಜ್ಮೆಂಟ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇದಕ್ಕೆ ವಿಶಾದ ವ್ಯಕ್ತ ಪಡಿಸುತ್ತದೆ," ಎಂದು ಸ್ಪಷ್ಟಣೆ ನೀಡಿದೆ. ಈ ಬಗ್ಗೆ ಹೇಳಿಕೆ ನೀಡಲು ಚೆನ್ನೈ ಸೂಪರ್ ಕಿಂಗ್ಸ್ ಆಗಲಿ ಡಾ. ಮಧು ಆಗಲಿ ಸುದ್ದಿ ಸಂಸ್ಥೆ ಸಂಪರ್ಕಿಸಿದಾಗ ಲಭ್ಯರಿರಲಿಲ್ಲ. ಅಂದಹಾಗೆ ಬೆಟ್ಟಿಂಗ್ ಹಿನ್ನೆಲೆಯಲ್ಲಿ 2 ವರ್ಷಗಳ ನಿಷೇಧ ಅನುಭವಿಸಿದ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ ಅಖಾಡಕ್ಕೆ 2018ರಲ್ಲಿ ಕಮ್ಬ್ಯಾಕ್ ಮಾಡಿದ್ದ ಚಾಂಪಿಯನ್ಸ್ ಪಟ್ಟ ಅಲಂಕರಿಸಿತ್ತು. ಬಳಿಕ 2019ರ ಆವೃತ್ತಿಯಲ್ಲೂ ಫೈನಲ್ ತಲುಪಿತ್ತಾದರೂ ಮುಂಬೈ ಇಂಡಿಯನ್ಸ್ ಎದುರು ಮುಗ್ಗರಿಸಿತ್ತು. ಈ ವರ್ಷ ಮಾರ್ಚ್ 29ರಿಂದ ಮೇ 24ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯಬೇಕಿತ್ತಾದರೂ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಟೂರ್ನಿಯನ್ನು ಅನಿರ್ದಿಷ್ಟ ಅವಧಿಗೆ ಬಿಸಿಸಿಐ ಮುಂದೂಡಿದೆ. ಮಾರ್ಚ್ 29ರಂದು ಸಿಎಸ್ಕೆ ತನ್ನ ಬದ್ಧ ಎದುರಾಳಿ ಮುಂಬೈ ಇಂಡಿಯನ್ಸ್ ವಿರುದ್ಧ 13ನೇ ಆವೃತ್ತಿಯ 2020 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಇದೇ ವೇಳೆ ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಬೇಕಿರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ರದ್ದಾದರೆ, ಆ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಆಯೋಜನೆಗೆ ಬಿಸಿಸಿಐ ಸಕಲ ಸಿದ್ಧತೆ ಕೈಗೊಂಡಿದೆ. ವಿಶ್ವಕಪ್ ಟೂರ್ನಿಯನ್ನು 2022ಕ್ಕೆ ಮುಂದೂಡಿದ್ದೇ ಆದರೆ ಸೆಪ್ಟೆಂಬರ್ 26ರಿಂದ ಮುಚ್ಚಿದ ಕ್ರೀಡಾಂಗಣಗಳಲ್ಲಿ ಐಪಿಎಲ್ ಪಂದ್ಯಗಳು ನಡೆಯುವುದು ಬಹುತೇಕ ಖಾತ್ರಿಯಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3hCQhNe