ರಾಜ್ಯಸಭಾ ಚುನಾವಣೆ: ದೇವೇಗೌಡರ ಸ್ಪರ್ಧೆಗೆ ಜೆಡಿಎಸ್‌ನಲ್ಲಿ ಒತ್ತಡ!

ಬೆಂಗಳೂರು: ರಾಜ್ಯಸಭೆಯ ಚುನಾವಣೆ ಘೋಷಣೆಗೊಂಡಿದ್ದು ನಾಲ್ಕು ಸ್ಥಾನಗಳಿಗೆ ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ಪೈಕಿ ಎರಡು ಸ್ಥಾನಗಳು ಆಡಳಿತರೂಢ ಬಿಜೆಪಿ ಪಾಲಾಗಲಿದ್ದು ಇನ್ನುಳಿದ ಎರಡು ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಜೆಡಿಎಸ್‌ ಮೈತ್ರಿಯೊಂದಿಗೆ ಹಂಚಿಕೆ ಮಾಡುವ ತಂತ್ರಗಾರಿಕೆ ನಡೆಸುತ್ತಿದೆ. ಜೆಡಿಎಸ್‌ನಲ್ಲಿ ಕುಪೇಂದ್ರ ರೆಡ್ಡಿ ತೆರವಾದ ಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಆಯ್ಕೆ ಮಾಡಬೇಕು ಎಂಬ ಒತ್ತಡಗಳು ಜೆಡಿಎಸ್‌ನಲ್ಲಿ ಹೆಚ್ಚಾಗುತ್ತಿದೆ. ಈಗಾಗಲೇ ಜೆಡಿಎಸ್‌ನ ಕೆಲವು ಶಾಸಕರುಗಳು ದೇವೇಗೌಡರ ಆಯ್ಕೆಗೆ ಒತ್ತಡ ಹೇರುತ್ತಿದ್ದಾರೆ. ಸದ್ಯದ ದೇಶದ ಪರಿಸ್ಥಿತಿಯಲ್ಲಿ ದೇದೇಗೌಡರಂತಹ ಹಿರಿಯ ನಾಯಕರ ಉಪಸ್ಥಿತಿ ರಾಜ್ಯಸಭೆಯಲ್ಲಿ ಅಗತ್ಯವಿದೆ ಎಂಬ ಅಭಿಪ್ರಾಯಗಳು ಪಕ್ಷದಲ್ಲಿ ವ್ಯಕ್ತವಾಗುತ್ತಿದೆ ಎಂಬ ಮಾಹಿತಿ ಇದೆ. ಆದರೆ ದೇವೇಗೌಡರು ಯಾವುದೇ ಅಭಿಪ್ರಾಯಕ್ಕೆ ಬಂದಿಲ್ಲ. ಸದ್ಯ ಜೆಡಿಎಸ್‌ ಬಳಿ 34 ಮತಗಳಿವೆ. ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾಡಿಕೊಂಡರೆ 14 ಮತಗಳನ್ನು ಪಡೆದುಕೊಂಡು ರಾಜ್ಯಸಭೆಗೆ ಆಯ್ಕೆಯಾಗುವುದು ಸುಲಭವಾಗುತ್ತದೆ. ಆದರೆ ಕಾಂಗ್ರೆಸ್ ಇದಕ್ಕೆ ಸಮ್ಮತಿ ಸೂಚಿಸುತ್ತದೆಯಾ ಎಂಬುವುದು ಕುತೂಹಲ ಸೃಷ್ಟಿಸಿದೆ. ಈ ನಿಟ್ಟಿನಲ್ಲಿ ಕಾದು ನೋಡುವ ತಂತ್ರಕ್ಕೆ ದೇವೇಗೌಡರು ಮುಂದಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೆ ಕಸರತ್ತುಗಳು ನಡೆಯುತ್ತಿದೆ. ಈ ಮೂಲಕ ಜೆಡಿಎಸ್‌ನಿಂದ ಎಚ್‌ಡಿ ದೇವೇಗೌಡರು ಸ್ಪರ್ಧೆ ನಡೆಸಿದರೆ ಕಾಂಗ್ರೆಸ್ ಬೆಂಬಲ ಕೊಡುವ ಸಾಧ್ಯತೆಯೂ ಇದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ಕುರಿತಾಗಿ ಸಕರಾತ್ಮಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು ಆದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡೆ ಏನು ಎಂಬುವುದು ಕುತೂಹಲ ಸೃಷ್ಟಿಸಿದೆ.


from India & World News in Kannada | VK Polls https://ift.tt/2BkyQAb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...