ಕೊಪ್ಪಳದಲ್ಲೂ ತಪಾಸಣೆಯ ಬಳಿಕವೇ ಎಕ್ಸಾಂ ಹಾಲ್‌ಗೆ ಹೊರಟ ವಿದ್ಯಾರ್ಥಿಗಳು

ಕೊಪ್ಪಳ: ಕೊರೊನಾದಿಂದಾಗಿ ಲಾಕ್ಡೌನ್‌ ಆಗಿದ್ದರಿಂದ ಮುಂದೂಡಲ್ಪಟ್ಟಿದ್ದ ಹತ್ತನೇ ತರಗತಿಯ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿದೆ. ಕೊರೊನಾ ಹರಡುವ ಭೀತಿಯಲ್ಲಿರುವಾಗಲೇ ಪೋಷಕರ ಪರವಿರೋಧದ ನಡುವೆಯೂ ರಾಜ್ಯ ಸರ್ಕಾರ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಈಗಾಗಲೇ ಮೊದಲ ಪರೀಕ್ಷೆಆರಂಭವಾಗಿದೆ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವ ಹಿನ್ನೆಲೆ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು ವಿದ್ಯಾರ್ಥಿಗಳನ್ನು ಪರೀಕ್ಷಿಸಿಯೇ ಒಳಗೆ ಬಿಡಲಾಗ್ತಿದೆ. ಇತ್ತ ಕೊಪ್ಪಳ ಜಿಲ್ಲೆಯಲ್ಲೂ ಕೂಡ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಪರೀಕ್ಷಿಸಿಯೇ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗಿದೆ. ಕೊರೊನಾ ಭೀತಿಯ ಮಧ್ಯೆಯೂ ಕೊಪ್ಪಳ ಜಿಲ್ಲೆಯಾದ್ಯಂತ ಒಟ್ಟು 80 ಪರೀಕ್ಷಾ ಕೇಂದ್ರಗಳಲ್ಲಿ 22,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಕರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಬಳಿಕವಷ್ಟೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿದೆ. ಇನ್ನೊಂದೆಡೆ ಕೊಪ್ಪಳ ಜಿಲ್ಲೆಯ ಕಂಟೋನ್ಮೆಂಟ್ ಏರಿಯಾದಲ್ಲಿರುವ 82 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಾಹನ ಮತ್ತು ಕೊಠಡಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.


from India & World News in Kannada | VK Polls https://ift.tt/2VbdrAH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...