ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಕೊರೊನಾ ಎಫೆಕ್ಟ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಾರ್ಯಕ್ರಮಕ್ಕೂ ತಟ್ಟಿದೆ. ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳು ವಿಧಾನಸೌಧಕ್ಕೆ ಸ್ಥಳಾಂತರಗೊಂಡಿವೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಪೊಲೀಸ್ ವಸತಿ ಗೃಹಗಳು, ಸಂಚಾರಿ ಪೊಲೀಸ್ ಠಾಣೆ ಹಾಗೂ ವೈರ್ಲೆಸ್ ತರಬೇತಿ ಶಾಲೆ ಉದ್ಘಾಟನೆ ಕಾರ್ಯಕ್ರಮ ನಿಗದಿಯಾಗಿತ್ತು. 11.30 ಕ್ಕೆ ಕೊರೊನಾ ಹಾಗೂ ಇನ್ನಿತರ ಆಡಳಿತಾತ್ಮಕ ವಿಚಾರಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಹಿರಿಯ ಅಧಿಕಾರಿಗಳೊಂದಿಗೆ ಬಿಎಸ್ವೈ ಸಬೆ ಕೂಡಾ ನಿಗದಿಯಾಗಿತ್ತು. ಆದರೆ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಮುಂಜಾಗರೂಕತಾ ಕ್ರಮವಾಗಿ ಸ್ಯಾನಿಟೈಸಿಂಗ್ ಮಾಡುವ ಉದ್ದೇಶದಿಂದ ಕಾರ್ಯಕ್ರಮಗಳು ವಿಧಾನಸೌಧಕ್ಕೆ ಶಿಫ್ಟ್ ಆಗಿವೆ. ವಿಧಾನಸೌಧದ ಕಮಿಟಿ ರೂಮ್ನಲ್ಲಿ ಶುಕ್ರವಾರದ ಎಲ್ಲಾ ಸಭೆಗಳು ಹಾಗೂ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಿಎಂ ಕಚೇರಿ ತಿಳಿಸಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗುರುವಾರ ಕೋವಿಡ್-19 ಸೋಂಕಿಗೆ ತುತ್ತಾಗಿ 12 ಮಂದಿ ಸಾವನ್ನಪ್ಪಿದ್ದಾರೆ.
from India & World News in Kannada | VK Polls https://ift.tt/3fEsvP8