ನವದೆಹಲಿ: ಕೊರೊನಾ ವೈರಸ್ ಹಾವಳಿಯ ನಡುವೆಯೂ ಸದೃಢವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದ ಉದ್ಯಮ ಒಕ್ಕೂಟ(CII)ದ ವಾರ್ಷಿಕ ಅಧಿವೇಶನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಆರ್ಥಿಕ ಬೆಳವಣಿಗೆಯನ್ನು ಮರಳಿ ಪಡೆಯುವ ವಿಷಯದ ಕುರಿತು ಭಾಷಣ ಮಾಡಿದರು. ಭಾರತದ ಉದ್ಯಮ ಒಕ್ಕೂಟ(CII)ದ 125ನೇ ವರ್ಷಾಚರಣೆ ಸಂದರ್ಭದಲ್ಲಿ ಸಂಘಟನೆಯ ಎಲ್ಲಾ ಸದಸ್ಯರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದರು. ಸಂಘಟನೆಯ ಬೆಳವಣಿಗೆಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ಹೇಳಿದರು. ಪ್ರಧಾನಿ ಮೋದಿ ಅವರ ಭಾಷಣದ ಪ್ರಮುಖ ಅಂಶಗಳು ಇಂತಿವೆ:
- ಕೊರೊನಾ ವೈರಸ್ ಭಾರತದ ಆರ್ಥಿಕತೆಗೆ ದೊಡ್ಡ ಪೆಟ್ಟು ನೀಡಿರುವುದು ನಿಜ.
- ದೇಶ ಕೊರೊನಾ ನೀಡಿರುವ ಆರ್ಥಿಕ ಹೊಡೆತದಿಂದ ಹೊರಬರಲು ಶಕ್ತವಾಗಿದೆ.
- ಕೇಂದ್ರ ಸರ್ಕಾರದ ಆರ್ಥಿಕ ಯೋಜನೆಗಳು ಖಂಡಿತವಾಗಿ ಉತ್ತಮ ಫಲಿತಾಂಶ ನೀಡಲಿದೆ.
- ಸಮಾಜದ ಎಲ್ಲಾ ವರ್ಗಗಳ ಅಭ್ಯುದಯಕ್ಕಾಗಿ ಕೇಂದ್ರ ಆರ್ಥಿಕ ಯೋಜನೆಗಳನ್ನು ರೂಪಿಸಿದೆ.
- ಬಡ ಹಾಗೂ ಮಧ್ಯಮ ವರ್ಗದ ಉನ್ನತಿಗಾಗಿ ಈ ಆರ್ಥಿಕ ಯೋಜನೆಗಳು ಸಹಾಯಕಾರಿ.
- ಆರ್ಥಿಕ ನಿರ್ಭರ ಭಾರತ ಯೋಜನೆ ದೇಶದ ಆರ್ಥಿಕ ಬೆಳವಣಿಗೆಗೆ ವೇಗ ನೀಡಲಿದೆ.
- ಕೊರೊನಾ ಸಮಯದಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ಸಮಾಜದ ಎಲ್ಲಾ ವರ್ಗಗಳನ್ನೂ ತಲುಪಿದೆ.
- ರೈತ ಸಮುದಾಯ ಹಾಗೂ ಕಾರ್ಮಿಕ ಸಮುದಾಯವನ್ನು ಗಮನದಲ್ಲಿಟ್ಟುಕೊಂಡೇ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.
- ಭಾರತದ ತಂತ್ರಜ್ಞಾನ ಬೆಳವಣಿಗೆ ದೇಶದ ಆರ್ಥಿಕ ಪುನಶ್ಚೇತನಕ್ಕೆ ನಾಂದಿ ಹಾಡಲಿದೆ.
- ಪಬ್ಲಿಕ್-ಪ್ರೈವೇಟ್ ಮಾದರಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡಲಾಗುವುದು.
- MSME ಕ್ಷೇತ್ರದತ್ತ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಿದ್ದು, ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಈ ಕ್ಷೇತ್ರ ತನ್ನ ಕೊಡುಗೆಯನ್ನು ನೀಡಲಿದೆ.
- ಭಾರತದ ಭವಿಷ್ಯವನ್ನು ನಾವೆಲ್ಲಾ ಒಟ್ಟಾಗಿ ನಿರ್ಧರಿಸಲಿದ್ದು, ದೇಶ ಯಶಸ್ಸಿನ ಹಾದಿಯಲ್ಲಿ ಮರಳುವುದು ಶತಸಿದ್ಧ
from India & World News in Kannada | VK Polls https://ift.tt/2TVw8HZ