ಮಾರಕ ಕೊರೊನಾ ವೈರಸ್ ಹಾವಳಿಯಿಂದ ಮುಂದೂಡಲ್ಪಟ್ಟಿದ್ದ ರಾಜ್ಯಸಭೆ ಚುನಾವಣೆಗೆ ಕೊನೆಗೂ ಇಂದು(ಶುಕ್ರವಾರ) ಮುಹೂರ್ತ ಕೂಡಿ ಬಂದಿದೆ. ಅದರಂತೆ ಒಟ್ಟು 24 ರಾಜ್ಯಸಭಾ ಸೀಟುಗಳಿಗೆ ಇಂದು ಮತದಾನ ಆರಂಭವಾಗಿದ್ದು, ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ಮುಂದುವರೆದಿದೆ. ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೂಚಿಸಿರುವ ನಿಯಮಾವಳಿಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ಪ್ರಮುಖವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕೇಂದ್ರ ಸರ್ಕಾರದ ನಿಯಮಾವಳಿಗಳನ್ನು ಪಾಲಿಸಲು ವಿಶೇಷ ಒತ್ತು ನೀಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತದಾನಕ್ಕೆ ಬರುವ ಶಾಸಕರನ್ನು ಕಡ್ಡಾಯ ಸ್ಕ್ರೀನಿಂಗ್ಗೆ ಗುರಿಡಪಿಸಲಾಗುತ್ತಿದ್ದು, ಅನಾರೋಗ್ಯ ಹೊಂದಿರುವ ಶಾಸಕರಿಗಾಗಿ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಈ ಎಲ್ಲಾ ಮಾರ್ಗಸೂಚಿಗಳ ಪಾಲನೆಗಾಗಿ ಚುನಾವಣಾ ಆಯೋಗ ಅಧಿಕಾರಿಗಳನ್ನೂ ನೇಮಿಸಿದೆ. ಹಾಗದಾರೆ ಈ 10 ರಾಜ್ಯಗಳಲ್ಲಿ ನಡೆಯುತ್ತಿರುವ ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆಯತ್ತ ಗಮನಹರಿಸುವುದಾದರೆ..ಮಧ್ಯಪ್ರದೇಶದ 3 ರಾಜ್ಯಸಭಾ ಸೀಟುಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಕಮಲ್ನಾಥ್ ಸೇರಿದಂತೆ ಪ್ರಮುಖರು ಮತ ಚಲಾಯಿಸಿದ್ದಾರೆ.
ಮತದಾನ ಪ್ರಕ್ರಿಯೆಗೆ ವಿಶೇಷ ವ್ಯವಸ್ಥೆ ಮಾಡಿರುವ ಚುನಾವಣಾ ಆಯೋಗ, ಸಾಮಾಜಿಕ ಅಂತರದ ಪಾಲನೆಗೆ ಹೆಚ್ಚಿನ ಒತ್ತು ನೀಡಿರುವುದು ಕಂಡುಬಂತು.
ರಾಜ್ಯಸಭೆ ಚುನಾವಣೆ: ನೀವು ತಿಳಿದಿರಬೇಕಾದ ಜಿದ್ದಾಜಿದ್ದಿಯ ರೋಚಕ ಸಂಗತಿಗಳು!
ಇನ್ನು ಮತದಾನ ಮಾಡಲು ಬಿಜೆಪಿ ಶಾಸಕರು ಖಾಸಗಿ ಬಸ್ನಲ್ಲಿ ವಿಧಾನಸಭೆಗೆ ಆಗಮಿಸಿದ್ದು ವಿಶೇಷವಾಗಿತ್ತು. ಅದರಂತೆ ಮತದಾನ ಮಾಡಲು ಬಂದ ಕಮಲ್ನಾಥ್ ಮಾಧ್ಯಮದವರೊಂದಿಗೆ ಮಾತನಾಡಿ ರಾಜ್ಯದಲ್ಲಿ ನಾವು ಒಂದು ಸೀಟಿನಲ್ಲಿ ಜಯ ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅದರಂತೆ ರಾಜಸ್ಥಾನದಲ್ಲೂ 3 ರಾಜ್ಯಸಭಾ ಸೀಟುಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವು ಪ್ರಮುಖರು ಮತದಾನ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಎರಡು ಹಾಗೂ ಬಿಜೆಪಿ ಒಂದು ಸೀಟುಗಳಲ್ಲಿ ಗೆಲುವು ಪಡೆಯುವುದು ನಿಶ್ಚಿತವಾಗಿದೆ. ಆದರೆ ಕುದುರೆ ವ್ಯಾಪಾರದ ಭಯದಲ್ಲಿದ್ದ ಕಾಂಗ್ರೆಸ್, ತನ್ನೆಲ್ಲಾ ಶಾಸಕರನ್ನೂ ರೆಸಾರ್ಟ್ಗೆ ಶಿಫ್ಟ್ ಮಾಡಿತ್ತು. ಅದರಂತೆ ಕಾಂಗ್ರೆಸ್ ಶಾಸಕರು ಮೂರು ಪ್ರತ್ಯೇಕ ಬಸ್ಸುಗಳಲ್ಲಿ ವಿಧಾನಸಭೆಗೆ ಆಗಮಿಸಿದ್ದು ವಿಶೇಷವಾಗಿತ್ತು.
ಶುಕ್ರವಾರ ರಾಜ್ಯಸಭೆ ಚುನಾವಣೆ, 3 ರಾಜ್ಯಗಳಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ
ಮತದಾನ ಪ್ರಕ್ರಿಯೆಗೆ ವಿಶೇಷ ವ್ಯವಸ್ಥೆ ಮಾಡಿರುವ ಚುನಾವಣಾ ಆಯೋಗ, ಸಾಮಾಜಿಕ ಅಂತರದ ಪಾಲನೆಗೆ ಹೆಚ್ಚಿನ ಒತ್ತು ನೀಡಿರುವುದು ಕಂಡುಬಂತು.
ಇನ್ನು ಗುಜರಾತ್ನ 4 ರಾಜ್ಯಸಭಾ ಸೀಟುಗಳಿಗೆ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಶಾಸಕರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.
ಪ್ರಮುಖವಾಗಿ ಚುನಾವಣೆಗೂ ಮುನ್ನವೇ ಹಲವು ಕಾಂಗ್ರೆಸ್ ಶಾಸಕರು ಪಕ್ಷ ತ್ಯಜಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ಗೆ ಭಾರೀ ಹಿನ್ನಡೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಆದರೆ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲವಾಗಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಕುದುರೆ ವ್ಯಾಪಾರದ ಆರೋಪ ಹೊರಿಸಿದೆ. ಸದ್ಯ ಶಾಸಕರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಫಲಿತಾಂಶದ ಬಳಿಕವಷ್ಟೇ ಸ್ಪಷ್ಟ ಚಿತ್ರಣ ದೊರೆಯಲಿದೆ.
ಶಾಸಕರ ಖರೀದಿಗಾಗಿ ರಾಜ್ಯಸಭಾ ಚುನಾವಣೆ ಮುಂದೂಡಿಕೆ - ಕಾಂಗ್ರೆಸ್ ಆರೋಪ
ಮತದಾನ ಪ್ರಕ್ರಿಯೆಗೆ ವಿಶೇಷ ವ್ಯವಸ್ಥೆ ಮಾಡಿರುವ ಚುನಾವಣಾ ಆಯೋಗ, ಸಾಮಾಜಿಕ ಅಂತರದ ಪಾಲನೆಗೆ ಹೆಚ್ಚಿನ ಒತ್ತು ನೀಡಿರುವುದು ಕಂಡುಬಂತು.
ಅದರಂತೆ ಈಶಾನ್ಯ ರಾಜ್ಯಗಳಲ್ಲೂ ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಮಣಿಪುರದ ರಾಜ್ಯಸಭೆ ಚುನಾವಣೆ ಭಾರೀ ಪ್ರಾಮುಖ್ಯತೆ ಪಡೆದುಕೊಂಡಿದೆ.
ರಾಜ್ಯಸಭೆ ಚುನಾವಣೆ ನಡೆಯುತ್ತಿರುವ ಈಶಾನ್ಯ ರಾಜ್ಯಗಳು:
ಮೇಘಾಲಯ-01
ಮಣಿಪುರ-01
ಅರುಣಾಚಲಪ್ರದೇಶ-01
ಮಿಜೋರಾಂ-01
ಮಣಿಪುರದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಈ ನಡುವೆಯೇ ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯುತ್ತಿರುವುದು ಭಾರೀ ಕುತೂಹಲ ಮೂಡಿಸಿದೆ.
ಮಣಿಪುರದಲ್ಲಿ ಬಿಜೆಪಿ ಸರಕಾರಕ್ಕೆ ಸಂಕಷ್ಟ, ಯಾವುದೇ ಕ್ಷಣದಲ್ಲಿ ಸರಕಾರ ಪತನ ಸಾಧ್ಯತೆ
ಮತದಾನ ಪ್ರಕ್ರಿಯೆಗೆ ವಿಶೇಷ ವ್ಯವಸ್ಥೆ ಮಾಡಿರುವ ಚುನಾವಣಾ ಆಯೋಗ, ಸಾಮಾಜಿಕ ಅಂತರದ ಪಾಲನೆಗೆ ಹೆಚ್ಚಿನ ಒತ್ತು ನೀಡಿರುವುದು ಕಂಡುಬಂತು.
from India & World News in Kannada | VK Polls https://vijaykarnataka.com/news/india/voting-is-underway-for-24-rajya-sabha-seats-in-10-states/articleshow/76458548.cms