ಬಿಜೆಪಿಯಲ್ಲಿ ಮತ್ತೆ ಭಿನ್ನರಾಗ, ಯೋಜನೆಗಳ ಅನುದಾನ ಬಿಡುಗಡೆಗಾಗಿ ಶಾಸಕರ ಬೇಡಿಕೆ

ಬೆಂಗಳೂರು: ಕ್ಷೇತ್ರಗಳಲ್ಲಿ ಜಾರಿಗೊಂಡಿರುವ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮೇಲೆ ಶಾಸಕರ ಒತ್ತಡ ಹೆಚ್ಚಾಗುತ್ತಿದೆ. ಗುರುವಾರವೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅವರನ್ನು ಉತ್ತರ ಕರ್ನಾಟಕ, ಕರಾವಳಿ ಭಾಗದ ಶಾಸಕರು ಕಟೀಲ್‌ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಅನುದಾನ ಬಿಡುಗಡೆಗೊಳಿಸುವ ವಿಚಾರವಾಗಿ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌, ಅರವಿಂದ ಬೆಲ್ಲದ್‌, ಅಭಯ್‌ ಪಾಟೀಲ,ಅನಿಲ್‌ ಬೆನಕೆ, ಡಾ.ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್‌ ಮತ್ತಿತರರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದಕ್ಕೂ ಮುನ್ನ ಅರವಿಂದ ಬೆಲ್ಲದ್‌ ಮನೆಯಲ್ಲಿ ಪೂರ್ವಭಾವಿ ಚರ್ಚೆ ನಡೆಸಿದರು ಎಂದು ಗೊತ್ತಾಗಿದೆ. ಜಾರಿಗೊಂಡಿರುವ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಮುಂದುವರಿಸಲು ನಮ್ಮ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ. ಮುಖ ನೋಡಿ ಮಣೆ ಹಾಕಲಾಗುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಶಾಸಕರ ಬೆಡಿಕೆಗೆ ಸಿಎಂ ಕಡೆಯಿಂದಲೂ ಸರಿಯಾದ ಸ್ಪಂದನೆಯಿಲ್ಲ. ನಾವು ಯಾರ ಬಳಿ ಹೋಗಬೇಕು? ನೀವು ಮಧ್ಯೆ ಪ್ರವೇಶ ಮಾಡಬೇಕು, ಎಂದು ನಳಿನ್ ಅವರನ್ನು ಒತ್ತಾಯಿಸಿದರು ಎನ್ನಲಾಗಿದೆ. ಈ ಕುರಿತಾಗಿ ಮಾತನಾಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರ ಭರತ್ ಶೆಟ್ಟಿ, ಕ್ಷೇತ್ರದ ಅನುದಾನ ಹಂಚಿಕೆ ವಿಚಾರವಾಗಿ ನಾವು ರಾಜ್ಯಾಧ್ಯಕ್ಷರನ್ನು ಭೇಟಿಯಾಗಿಲ್ಲ. ಕೊರೊನಾ ಕಾರಣದಿಂದಾಗಿ ಕೆಲವೊಂದು ಯೋಜನೆಗಳ ಅನುದಾನಗಳು ಬಿಡುಗಡೆಗೊಂಡಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಅದನ್ನು ಮುಂದುವರಿಯಲು ಅನುದಾನದ ಅಗತ್ಯವಿದೆ. ಇದನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ಜೊತೆಗೆ ಚರ್ಚೆ ನಡೆಸಿದ್ದೇವೆ. ಮುಖ್ಯಮಂತ್ರಿಯನ್ನೂ ಭೇಟಿ ಮಾಡುವ ಸಂದರ್ಭದಲ್ಲಿ ಈ ಬಗ್ಗೆ ಚರ್ಚೆ ನಡೆಸಲಿದ್ದೇವೆ” ಎಂದರು. ಶಾಸಕರ ಭೇಟಿಯ ಸಂದರ್ಭದಲ್ಲಿ ಅವರಿಗೆ ನಳಿನ್ ಕುಮಾರ್ ಕಟೀಲ್, ಈ ವಿಚಾರವಾಗಿ ಸಿಎಂ ಅವರೊಂದಿಗೆ ಮಾತುಕತೆ ನಡೆಸಲಾಗುವುದು. ವಿಭಾಗವಾರು ಸಭೆ ಹಾಗೂ ಶಾಸಕಾಂಗ ಪಕ್ಷದ ಸಭೆ ನಡೆಸಿ ಗೊಂದಲ ಇತ್ಯರ್ಥ ಪಡಿಸುವ ಭರವಸೆ ನೀಡಿದರು ಎಂದು ತಿಳಿದು ಬಂದಿದೆ.


from India & World News in Kannada | VK Polls https://ift.tt/3hI9ayg

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...