ಜೈಪುರ: ಬಿಜೆಪಿಗೆ ಸೇರಲು ಮಾಜಿ ಡಿಸಿಎಂ ಸಚಿನ್ ಪೈಲಟ್ ತನಗೆ ರೂ. ಹಣದ ಆಮಿಷ ಒಡ್ಡಿದ್ದರು ಎನ್ನುವ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಆರೋಪ ಇದೀಗ ಕೋರ್ಟ್ ಮೆಟ್ಟಿಲೇರಿದೆ. ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಅವರಿಗೆ ಲೀಗಲ್ ನೋಟಿಸನ್ನ ಸಚಿನ್ ಪೈಲಟ್ ನೀಡಿದ್ದಾರೆ. ಸಚಿನ್ ಪೈಲಟ್ ತಮ್ಮನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರೆ 35 ಕೋಟಿ ರೂ. ನೀಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದಿದ್ದೆ ಎಂದು ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಇತ್ತೀಚೆಗೆ ಆರೋಪಿಸಿದ್ದರು. ಈ ಆರೋಪವನ್ನು ತಿರಸ್ಕರಿಸಿದ್ದ ಸಚಿನ್ ಪೈಲಟ್, ನ್ಯಾಯವನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದರು. ಅಲ್ಲದೇ ತಮ್ಮ ಮೇಲಿನ ಇಂತಹ ಅಸಹ್ಯಕರ ಆರೋಪಗಳಿಗೆ ಮಾಡಿರುವುದಕ್ಕೆ ಅಚ್ಚರಿಯಾಗುವುದಿಲ್ಲ. ಆದರೆ ಇದು ಹೆಚ್ಚು ದುಃಖವನ್ನು ನೀಡುತ್ತದೆ ಎಂದು ತಿಳಿಸಿದ್ದರು. ಇದೀಗ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಗಿರಿರಾಜ್ ಸಿಂಗ್ ವಿರುದ್ಧ, ಚಿನ್ ಪೈಲಟ್ ಕಾನೂನು ಹೋರಾಟದ ಹಾದಿ ಹಿಡಿದಿದ್ದಾರೆ. ಇದರ ಮೊದಲ ಭಾಗವಾಗಿ ಕೋರ್ಟ್ ಮೂಲಕ ಸಚಿನವ ವಿರುದ್ಧ ನೋಟಿಸ್ ಜಾರಿಗೊಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಜಸ್ಥಾನದಲ್ಲಿ ರಾಜಕೀಯ ಹೈಡ್ರಾಮವೇ ನಡೆಯುತ್ತಿದೆ. ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯವೆದ್ದಿರುವ ಸಚಿನ್ ಪೈಲಟ್ ಬಣ ಎಷ್ಟೇ ಪ್ರಯತ್ನಿಸಿದರು ಪಟ್ಟುಬಿಡುತ್ತಿಲ್ಲ. ಸದ್ಯ ಸಚಿನ್ ಬಣದ ಅನರ್ಹತೆ ಬಗ್ಗೆ ಶುಕ್ರವಾರ ಕೋರ್ಟ್ ತೀರ್ಪು ನೀಡಲಿದೆ.
from India & World News in Kannada | VK Polls https://ift.tt/2ZOHFMv