ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಶನಿವಾರ ಮಧ್ಯಾಹ್ನ ಸಂಪುಟ ಸಭೆ ನಡೆಸಿದರು. ಈ ಸಭೆಯಲ್ಲಿ ಅಧಿವೇಶನ ನಡೆಸಲು ಅನುಮತಿ ಕೋರಿ ಕಲ್ರಾಜ್ ಮಿಶ್ರಾ ಅವರಿಗೆ ಪರಿಷ್ಕೃತ ಶಿಫಾರಸು ಸಲ್ಲಿಸಲು ನಿರ್ಧರಿಸಲಾಗಿದೆ. ಶುಕ್ರವಾರ ಇಡೀ ದಿನ ರಾಜಸ್ಥಾನದಲ್ಲಿ ರಾಜಕೀಯ ಹೈಡ್ರಾಮವೇ ನಡೆಡಿತ್ತು. ರಾಜ್ಯಪಾಲರು ಅಧಿವೇಶನ ಕರೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ 4 ಗಂಟೆಗೂ ಹೆಚ್ಚು ಕಾಲ ರಾಜಭವನದಲ್ಲಿಯೇ ಸಿಎಂ ಸೇರಿದಂತೆ ಕಾಂಗ್ರೆಸ್ ಶಾಸಕರು ಧರಣಿ ಕೂತಿದ್ದರು. ನಂತರ ರಾತ್ರಿ ತಮ್ಮ ನಿವಾಸದಲ್ಲಿಯೇ ಗೆಹ್ಲೋಟ್ ಮ್ಯಾರಥಾನ್ ಸಂಪುಟ ಸಭೆ ನಡೆಸಿದ್ದರು. ಸಭೆಯಲ್ಲಿ ಅಧಿವೇಶನ ಕರೆಯಲು ಅನುಮತಿ ನಿರಾಕರಿಸಿ ರಾಜ್ಯಪಾಲರು ಎತ್ತಿದ್ದ 6 ಪ್ರಶ್ನೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆದಿತ್ತು.
ಶನಿವಾರ ಮತ್ತೆ ಸಂಪುಟ ಸಭೆ ಹಾಗೂ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಿರುವ ಸಿಎಂ ಗೆಹ್ಲೋಟ್, ಸಂಜೆ 4 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಿ ಅಧಿವೇಶನ ಕರೆಯಲು ಮನವಿ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಕೊರೊನಾ ವೈರಸ್ ಮತ್ತು ಆರ್ಥಿಕ ಬಿಕ್ಕಟ್ಟನ್ನು ಅಧಿವೇಶನದ ಅಜೆಂಡವಾಗಿ ಆಯ್ಕೆ ಮಾಡಲಾಗಿದ್ದು, ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಮತ್ತೊಮ್ಮೆ ಶಿಫಾರಸು ಮಾಡಲಾಗುತ್ತದೆ. ಇದಕ್ಕೆ ರಾಜ್ಯಪಾಲರು ಯಾವ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.
from India & World News in Kannada | VK Polls https://ift.tt/2ZZ3skP