ಕೋವಿಡ್‌ ಹಗರಣ: ಸಚಿವರು ಸತ್ಯವಂತರಾದರೆ ತನಿಖೆ ಬೇಡ ಎನ್ನುವುದೇಕೆ, ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ವೈದ್ಯಕೀಯ ಉಪಕರಣಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ? ಸಚಿವರುಗಳು ಸತ್ಯವಂತರು ಏನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಅವರು ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ , ಸರ್ಕಾರ ಅಂದರೆ ಸಾಮೂಹಿಕ ಜವಾಬ್ದಾರಿ. ಹೀಗಾಗಿ ನಿನ್ನೆ ಐದು ಸಚಿವರು ಪತ್ರಿಕಾಗೋಷ್ಠಿ ಮಾಡಿದ್ದಾರೆ. ನಾವು ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ಅವ್ಯವಹಾರದ ಬಗ್ಗೆ 14 ದಾಖಲೆಗಳನ್ನು ಕೊಟ್ಟಿದ್ದೇವೆ. ಆದರೂ ಆ ದಾಖಲೆಗಳನ್ನು ಸಚಿವರು ನಿರಾಕರಿಸುತ್ತಾರೆ ಎಂದರೆ ಅವರು ಭಂಡರಿದ್ದಾರೆ. ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕು ಎಂದರೆ ನ್ಯಾಯಾಂಗ ತನಿಖೆಯಾಗಲಿ. ಅದಕ್ಕೆ ಭಯವೇಕೆ ? ಸತ್ಯ ಹೊರ ಬಂದರೆ ಜನರೇ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ ಎಂದು ಸವಾಲು ಹಾಕಿದರು. ನಾವು ಸುಳ್ಳು ಹೇಳುತ್ತೇವೆ, ಅವವರೇ ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಅಂದು ಭಂಡತನ ಅಲ್ಲವೇ ? ಹೀಗಾಗಿ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ. ತನಿಖೆಗೆ ಸರ್ಕಾರ ಆದೇಶ ಮಾಡುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ. ನಾವು ತನಿಖೆಗೆ ಆಗ್ರಿಸಿದ ಮೇಲೆ ಕೆಲ ಉಪಕರಣಗಳ ಖರೀದಿಗೆನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು ಎಂದರು. ಮಂತ್ರಿಗಳಾಗಿರುವುದೇ ಸುಳ್ಳಾ ? ಪತ್ರಿಕಾಗೋಷ್ಠಿಯಲ್ಲಿ ನಿನ್ನೆ ನಾವು ಕೊಟ್ಟಿರುವುದೂ ನಾವು ಕೊಟ್ಟಿರುವುದೂ ಸರ್ಕಾರಿ ದಾಖಲೆಗಳೇ. ಅದು ಸುಳ್ಳು ಎನ್ನುವುದಾದರೆ ನಿನ್ನೆ ಸರ್ಕಾರದ ಪರವಾಗಿಪತ್ರಿಕಾಗೋಷ್ಠಿ ನಡೆಸಿದವರೂ ಮಂತ್ರಿಗಳಾಗಿರುವುದೇ ಸುಳ್ಳಾ ? ಸರ್ಕಾರದಲ್ಲಿ ಇರುವ ದಾಖಲೆಗಳೇ ಸುಳ್ಳಾ? ಎಂದು ಪ್ರಶ್ನಿಸಿದರು. ನಾವು ಕೊಟ್ಟಿರುವ ದಾಖಲೆಗಳನ್ನು ನಾನು ಸೃಷ್ಟಿ ಮಾಡಿದ್ದಲ್ಲ. ಉದಾಹರಣೆಗೆ ಕೇಂದ್ರ ಸರ್ಕಾರ ಪಿಎಂಒ ಕಚೇರಿಯಿಂದ ಹೊರಡಿಸಿರುವ ಪ್ರಕಟಣೆಯಲಿ 50 ಸಾವಿರ ವೆಂಟಿಲೇಟರ್‍ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ. ಇದಕ್ಕಾಗಿ ಎರಡು ಸಾವಿರ ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದೆ. ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ಅದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‍ಗಳೂ ಕಳಪೆ ಎಂದು ಮಂತ್ರಿಗಳು ಹೇಳಲಿ. ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರುಗಳಲ್ಲಿ ಐಷಾರಾಮಿಯೂ ಇರುತ್ತದೆ. ಸಾಮಾನ್ಯದ್ದೂ ಇರುತ್ತದೆ. ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬುದಿತ್ತು. ಕೇಂದ್ರ ಸಕಾರ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿ ಮಾಡಿವುದು ಸುಳ್ಳೇ ? ಇದಕ್ಕೆ ಮಂತ್ರಿಗಳು ನೀಡುವ ಉತ್ತರ ಏನು ? ಕಾರ್ಮಿಕ ಇಲಾಖೆಯಲ್ಲಿ ಒಂದು ಸಾವಿರ ಕೋಟಿ ರೂ.ಗಳ ಅವ್ಯವಹಾರ ಆಗಿದೆ ಎಂದು ಹೇಳಿಲ್ಲ. ಅಷ್ಟು ಖರ್ಚಾಗಿದೆ ಎಂದಿದ್ದೇನೆ. ಆದರೆ ಫುಡ್ ಪ್ಯಾಕೇಟ್ ಕೊಡುವಲ್ಲಿ ಅವ್ಯವಹಾರ ಆಗಿದೆ. ಒಂದು ಸಾವಿರ ಕೋಟಿ ಖರ್ಚಾಗಿದೆ ಅದಕ್ಕೆ ಲೆಕ್ಕ ಕೊಡಿ ಅಂದೆ. ಇವರು 324 ಕೋಟಿ ಮಾತ್ರ ಖರ್ಚು ಆಗಿದೆ. ಎನ್ನುತ್ತಾರೆ. ಆದರೆ ನಿನ್ನೆ ಮಂತ್ರಿಗಳೇ 2118 ಕೋಟಿ ರೂ. ವೆಚ್ಚ ಎಂದಿದ್ದು ಏಕೆ. ಅವರೇ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ ಎಂಬುದು ಇದರ ಅರ್ಥ ಎಂದು ಕಿಡಿಕಾರಿದರು. ಸಚಿವರು ಪಾಂಡವರು, ಕೌರವರ ಬಗ್ಗೆ ಮಾತನಾಡಿದ್ದೇನೆ. ಅವರು ಕೌರವರು ಆಗಲಿಕ್ಕೂ ಲಾಯಕ್ಕಿಲ್ಲ. ಮಹಾಭಾರತದ ಪಾಂಡವರು, ಕೌರವರ ವಿಚಾರ ಈಗ ಏಕೆ. ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಈ ವಿಚಾರದಲ್ಲಿ ಎಳೆದು ತರುವುದೇಕೆ ? ಸಿದ್ದರಾಮಯ್ಯ ಈಸ್ ಸಿದ್ದರಾಮಯ್ಯ ಸಿದ್ದರಾಮಯ್ಯ ಈಸ್ ಸಿದ್ದರಾಮಯ್ಯ. ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ. ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ. ಈವತ್ತು ಏನಾದರೂ ನೀತಿ, ನಿಯಮಗಳು ಇದ್ದರೆ ರಾಮಾಯಣ, ಮಹಾಭಾರತವೇ ಅದನ್ನು ಹೇಳಿಕೊಡುವುದು. ನಮಗೆ ರಾಜಕೀಯ ಹೇಳಿಕೊಡುವುದು ರಾಮಾಯಣ, ಮಹಾಭಾರತವೇ ಎಂದು ಸಿದ್ದರಾಮಯ್ಯ ಅವರು ಹೇಳಿದರು.


from India & World News in Kannada | VK Polls https://ift.tt/2CGIBcY

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...