ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ಸಂಸದ ಅವರಿಗೆ ಜುಲೈ 21 ಮಂಗಳವಾರ ಹುಟ್ಟುಹಬ್ಬದ ಸಂಭ್ರಮ. ಖರ್ಗೆ ಹುಟ್ಟಿದ ದಿನಕ್ಕೆ ಸಾಕಷ್ಟು ಮಂದಿ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಸಲ್ಲಿಸಿದ್ದಾರೆ. ಕೋವಿಡ್ ಕಾರಣದಿಂದ ಹುಟ್ಟುಹಬ್ಬವನ್ನು ಆಚರಣೆ ಮಾಡುವುದಿಲ್ಲ ಎಂದು ಖರ್ಗೆ ತಿಳಿಸಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರು ಹುಟ್ಟುಹಬ್ಬ ಆಚರಿಸದೆ ಕೋವಿಡ್ ಸೋಂಕಿತರ ಕುಟುಂಬಕ್ಕೆ ಸಹಕಾರ ಮಾಡಿ ಎಂದು ಮನವಿ ಮಾಡಿದ್ದಾರೆ. ಇನ್ನು ಖರ್ಗೆ ಹುಟ್ಟುಹಬ್ಬಕ್ಕೆ , ಬಿಜೆಪಿಯ ಹಲವು ಮುಖಂಡರು ಶುಭಕೋರಿದ್ದಾರೆ. ‘ಹಿರಿಯ ರಾಜಕಾರಣಿ, ಅಪ್ರತಿಮ ಸಂಸದೀಯ ಪಟು, ರಾಜ್ಯಸಭೆ ಸದಸ್ಯರು, ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರೂ ಆದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು.ತಮ್ಮ ಅನುಕರಣೀಯ ಸಾರ್ವಜನಿಕ ಸೇವೆ, ಸುದೀರ್ಘ ರಾಜಕೀಯ ಜೀವನಾನುಭವ ಎಲ್ಲ ಪೀಳಿಗೆಗೂ ಅಗತ್ಯವಾಗಿದ್ದು, ದೇವರು ನಿಮಗೆ ಆಯುರಾರೋಗ್ಯ ನೀಡಿ ಹರಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ‘ಹಿರಿಯ ನಾಯಕರು, ಮಾಜಿ ಸಚಿವರು, ರಾಜ್ಯಸಭಾ ಸದಸ್ಯರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ಕಾಲ ನಾಡಿನ ಸೇವೆ ಮಾಡುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡುವ ಮೂಲಕ ಶುಭಾಶಯ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಜನ್ಮದಿನ ಶುಭಾಶಯ ಕೋರಿದ್ದಾರೆ. ಹೀಗೆ ಕಾಂಗ್ರೆಸ್, ಬಿಜೆಪಿ ಮುಖಂಡರು ಸೇರಿದಂತೆ ಹಲವರು ಖರ್ಗೆ ಜನ್ಮದಿನಕ್ಕೆ ಶುಭಾಶಯವನ್ನು ಸಲ್ಲಿಸಿದ್ದಾರೆ.
from India & World News in Kannada | VK Polls https://ift.tt/3jjfhtL