ನವದೆಹಲಿ: 21ನೇ ದಿನಾಚರಣೆ ಅಂಗವಾಗಿ ಕಾರ್ಗಿಲ್ ಯೋಧರನ್ನು ಸ್ಮರಿಸಿದರ , ಭಾರತದ ರಕ್ಷಣಾ ಶಕ್ತಿಯನ್ನು ಇಡೀ ವಿಶ್ವಕ್ಕೆ ಪರಿಚಯ ಮಾಡಿಸಿದ ವೀರರಿಗೆ ನನ್ನ ನಮನ ಎಂದು ಹೇಳಿದ್ದಾರೆ. ತಮ್ಮ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾರ್ಗಿಲ್ ಯುದ್ಧ ಎಂಬ ಪಾಕಿಸ್ತಾನದ ಹುನ್ನಾರವನ್ನು ನಮ್ಮ ವೀರ ಯೋಧರು ಮಣಿಸಿದ ರೀತಿ ಅದ್ಭುತ ಎಂದು ಬಣ್ಣಿಸಿದರು. ಕಾರ್ಗಿಲ್ ಯುದ್ಧ ನಮ್ಮ ಸಾಮರಿಕ ಕ್ಷಮತೆ, ಯೋಧರ ಸಮರ್ಪಣೆ, ದೇಶ ರಕ್ಷಣೆಗಾಗಿ ಮಾಡಿದ ತ್ಯಾಗ ಬಲಿದಾನವನ್ನು ಇಡೀ ವಿಶ್ವಕ್ಕೆ ಪರಿಚಯಿಸಿದ ರೀತಿ ನಿಜಕ್ಕೂ ಅನನ್ಯ ಎಂದು ಪ್ರಧಾನಿ ಮೋದಿ ಹೇಳಿದರು. ದೇಶ ವಿರುದ್ಧದ ಹೋರಾಟದಲ್ಲಿ ಅತ್ಯಂತ ಮಹತ್ವದ ಘಟ್ಟದಲ್ಲಿದೆ ಎಂದು ಹೇಳಿರುವ ಪ್ರಧಾನಿ ಮೋದಿ, ನಾವು ಜಯದತ್ತ ಹೆಜ್ಜೆ ಹಾಕುತ್ತಿದ್ದೇವೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ. ಕೊರೊನಾ ವೈರಸ್ ಹಾವಳಿಯ ವಿರುದ್ಧದ ದೇಶದ ಹೋರಾಟವನ್ನು ಇಡೀ ವಿಶ್ವ ಗಮನಿಸುತ್ತಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಭಾಷಣದ ಪ್ರಮುಖ ಅಂಶಗಳು:
- ಕಾರ್ಗಿಲ್ ವಿಜಯ್ ದಿವಸ್ 21ನೇ ವರ್ಷಾಚರಣೆ ಅಂಗವಾಗಿ ದೇಶಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ.
- ಕಾರ್ಗಿಲ್ ಯುದ್ಧ ಭಾರತದ ಸಾಮರಿಕ ಕ್ಷಮತೆಯ ಪ್ರತೀಕ ಎಂದ ಪ್ರಧಾನಿ.
- ನಮ್ಮ ಯೋಧರ ತ್ಯಾಗ ಬಲಿದಾನವನ್ನು ನಾವೆಂದಿಗೂ ಮರೆಯುವುದಿಲ್ಲ ಎಂದ ಮೋದಿ.
- ನಮ್ಮ ಪ್ರತಿಯೊಂದು ಹೆಜ್ಜೆಯೂ ಭಾರತೀಯ ಸೈನಿಕನ ಗೌರವ ಹೆಚ್ಚಿಸುವತ್ತ ಇರಬೇಕು ಎಂದು ಪ್ರಧಾನಿ
- ಕೊರೊನಾ ವೈರಸ್ ವಿರುದ್ಧ ಭಾರತದ ಹೋರಾಟ ಜಯದತ್ತ ಮುಂದುವರೆಯುತ್ತಿದೆ.
- ಅದಾಗ್ಯೂ ನಾವು ಕೊರೊನಾ ವೈರಸ್ನ್ನು ಹಗುರವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದ ಮೋದಿ.
- ಕೊರೊನಾ ಸಮಯದಲ್ಲಿ ಜನರ ಸಮಾಜ ಸೇವೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ.
- ಭಾರತವನ್ನು ಆತ್ಮ ನಿರ್ಭರವನ್ನಾಗಿ ಮಾಡುವ ನಿಟ್ಟಿನಲ್ಲಿ ನಮ್ಮ ಜನ ಭಾಗಿಧಾರಿಕೆ ಅತ್ಯಂತ ಉನ್ನತ ಮಟ್ಟದಲ್ಲಿದೆ.
- ಕೊರೊನಾ ವೈರಸ್ ವಿರುದ್ಧದ ಹೋರಾಟದ ಈ ರೋಚಕ ಘಟ್ಟದಲ್ಲಿ ನಾವು ಮೈ ಮರೆಯಬಾರದು ಎಂದು ಎಚ್ಚರಿಸಿದ ಪ್ರಧಾನಿ.
- ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಅಂತಿಮ ಜಯ ನಮ್ಮದಾಗಲಿದ್ದು, ಇದಕ್ಕಾಗಿ ನಾವೆಲ್ಲಾ ಒಟ್ಟಾಗಿ ಶ್ರಮಿಸೋಣ ಎಂದು ಕರೆ ನೀಡಿದ ಪ್ರಧಾನಿ ಮೋದಿ.
- ಇದೇ ವೇಳೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳೊಂದಿಗೆ ನೇರವಾಗಿ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ, ವಿದ್ಯರ್ಥಿಗಳನ್ನು ಹುರಿದುಂಬಿಸಿದರು.
from India & World News in Kannada | VK Polls https://ift.tt/3g2LALt