ಬೆಂಗಳೂರು: ಭೂಸುಧಾಕರಣಾ ಕಾಯ್ದೆ ತಿದ್ದುಪಡಿ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ವಿರೋಧ ಪಕ್ಷದ ನಾಯಕ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಶುಕ್ರವಾರ ದಲಿತ ಸಂಘಟನೆಗಳ ಜೊತೆಗೆ ಸಮಾಲೋಚನಾ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿವಿಧ ದಲಿತ ಸಂಘಟನೆಗಳ ಮುಖಂಡರ ಜೊತೆಗೆ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ. ಭೂಸುಧಾಕರಣಾ ಕಾಯ್ದೆಯ ಅಪಾಯಗಳು ಹಾಗೂ ಅದರ ವಿರುದ್ಧ ರಾಜ್ಯವ್ಯಾಪ್ತಿ ಹೋರಾಟ ಸಂಘಟಿಸುವ ಮಾಡುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ರೈತ ಮುಖಂಡರ ಜೊತೆಗೂ ಸಿದ್ದರಾಮಯ್ಯ ಚರ್ಚೆ ಹಾಗೂ ಸಮಾಲೋಚನೆ ನಡೆಸಿದ್ದಾರೆ. ಈ ಸಭೆಯಲ್ಲಿ ತಿದ್ದುಪಡಿಯ ವಿರುದ್ಧ ಹರಿಹಾಯ್ದಿದ್ದರು. ಈ ಕಾಯ್ದೆಗೆ ತಿದ್ದುಪಡಿ ತಂದಿದ್ದು ರೈತರ ಪಾಲಿನ ಮರಣ ಶಾಸನ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ವಿವಿಧ ಸಂಘಟನೆಗಳ ಜೊತೆಗೆ ಸಭೆ, ಚರ್ಚೆ, ಸಮಾಲೋಚನೆ ನಡೆಸಿದ ಬಳಿಕ ರಾಜ್ಯಮಟ್ಟದಲ್ಲಿ ಹೋರಾಟ ರೂಪಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಲಾಕ್ಡೌನ್ ಇರುವ ಕಾರಣದಿಂದ ವಿವಿಧ ಸ್ವರೂಪದಲ್ಲಿ ಹೋರಾಟವನ್ನು ನಡೆಸಲು ತಯಾರಿ ನಡೆಸುತ್ತಿದ್ದಾರೆ.
from India & World News in Kannada | VK Polls https://ift.tt/3jAIkck