'ಸಿದ್ದರಾಮಯ್ಯರ ಸಹಕಾರ, ಮಾರ್ಗದರ್ಶನವನ್ನು ಸದಾ ಸ್ಮರಿಸುತ್ತೇನೆ. ಆದರೆ...' : ಡಾ.ಕೆ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಸಮಯದಲ್ಲೇ ಕೊರೊನಾ ಹಗರಣ ಆರೋಪ ಕೂಡ ಪಾಸಿಟಿವ್‌ ಕೇಸ್‌ಗಳಷ್ಟೇ ಬಿಸಿಬಿಸಿಯಾಗಿ ಚರ್ಚೆಯಾಗ್ತಿದೆ. ನಿನ್ನೆಯಷ್ಟೇ ವಿಪಕ್ಷದ ಆರೋಪಗಳ ಕೆಂಡದ ಸುರಿಮಳೆಗೆ ಆಡಳಿತ ಪಕ್ಷ ಕಬ್ಬಿಣದ ಕೊಡೆ ಹಿಡಿಯೋಕೆ ಪ್ರಯತ್ನ ಪಟ್ಟಿತ್ತು. ಈ ಮಧ್ಯೆ ಸರ್ಕಾರಕ್ಕೆ ಚಾಟಿಯೇಟು ನೀಡುವ ಮಧ್ಯೆ ತನ್ನ ಮಾಜಿ ಆಪ್ತ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ವಿರುದ್ಧವೂ ಕಿಡಿಕಾರಿದ್ದರು. ವಿಪಕ್ಷ ನಾಯಕ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ , ಇಷ್ಟು ವರ್ಷದ ರಾಜಕೀಯ ಅನುಭವದಲ್ಲಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ ಅಂತಾ ಅನ್ಸುತ್ತೆ ಎಂದಿದ್ದರು. ಇದರಿಂದ ಸಿಟ್ಟುಗೊಂಡ ಸಿದ್ದರಾಮಯ್ಯ, ಸುಧಾಕರ್ ಅಧಿಕಾರದ ಅಹಂನಿಂದ ಮಾತನಾಡುತ್ತಿದ್ದಾರೆ. ಪ್ರಸ್ತಾವನೆ, ಅನುಮೋದನೆ ಬಗ್ಗೆ 13 ಬಾರಿ ಬಜೆಟ್ ಮಂಡನೆ ಮಾಡಿರೋ ನನಗೆ ಪಾಠ ಮಾಡೋಕೆ ಬಂದಿದ್ದಾರೆ ಎಂದು ಗರಂ ಆಗಿದ್ದರು. ಇದಕ್ಕೆ ತಮ್ಮ ಟ್ವಿಟರ್‌ ಖಾತೆಯಲ್ಲಿ ಮತ್ತೆ ಪ್ರತಿಕ್ರಿಯೆ ನೀಡಿರೋ ಸಚಿವ ಸುಧಾಕರ್, ಮಾನ್ಯ ಸಿದ್ದರಾಮಯ್ಯನವರು ನಾನು ಅಧಿಕಾರದ ಅಹಂನಿಂದ ಮಾತನಾಡಿದ್ದೇನೆ ಮತ್ತು ನನಗೆ ಉಪಕಾರ ಸ್ಮರಣೆ ಇರಬೇಕು ಎಂದಿದ್ದಾರೆ. ಅವರು ಹಿಂದೆ ನೀಡಿರುವ ಸಹಕಾರ ಮತ್ತು ಮಾರ್ಗದರ್ಶನವನ್ನು ಸದಾ ಸ್ಮರಿಸುತ್ತೇನೆ ಮತ್ತು ನನ್ನ ಅಳಿಲು ಸೇವೆಯನ್ನು ಅವರೂ ಸಹ ಮರೆತಿಲ್ಲ ಎಂದು ಭಾವಿಸಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ. ಸುಧಾಕರ್ ಈ ಬಗ್ಗೆ ಎರಡು ಟ್ವೀಟ್‌ ಮಾಡಿದ್ದು ಮತ್ತೊಂದು ಟ್ವೀಟ್‌ನಲ್ಲಿ ‘ಕಳೆದ 5 ತಿಂಗಳಿನಿಂದ ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ಹೊತ್ತು ಕಾರ್ಯ ಕ್ಷಮತೆಯಿಂದ ಅವಿರತವಾಗಿ ಶ್ರಮಿಸುತ್ತಿರುವ ಸನ್ನಿವೇಶದಲ್ಲಿ ನನ್ನ ಇಲಾಖೆಯ ವಿರುದ್ಧ ಸತ್ಯಕ್ಕೆ ದೂರವಾದ ಅರೋಪಗಳು ಬಂದಾಗ ಜವಾಬ್ದಾರಿಯುತವಾಗಿ ವಾಸ್ತವಾಂಶವನ್ನು ಜನರ ಮುಂದಿಟ್ಟದ್ದೇನೆ. ಇದರಲ್ಲಿ ಯಾವುದೇ ವೈಯಕ್ತಿಕ ನಿಂದನೆ ಅಥವಾ ಅಪಹಾಸ್ಯದ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


from India & World News in Kannada | VK Polls https://ift.tt/3hw9UFH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...