ಸುಳ್ಳು ಸುದ್ದಿ ಹಬ್ಬಿದ ನೆಟ್ಟಿಗನಿಗೆ ಎಚ್ಚರಿಕೆ ಕೊಟ್ಟ ಕಮೀಷನರ್‌ ಭಾಸ್ಕರ್‌ ರಾವ್‌, ಟ್ವೀಟ್‌ನಲ್ಲಿ ಏನಿದೆ‌?

ಬೆಂಗಳೂರು: ಕೊರೊನಾ ಸಾವಿನ ಬಗ್ಗೆ ಸುಳ್ಳು ಸುದ್ದಿ ಟ್ವೀಟ್‌ ಮಾಡಿದ್ದ ಒಬ್ಬರಿಗೆ ನಗರ ಪೊಲೀಸ್‌ ಕಮಿಷನರ್‌ ಖಡಕ್‌ ಎಚ್ಚರಿಕೆ ಕೊಟ್ಟು ತನಿಖೆಗೆ ಆದೇಶಿಸಿದ್ದಾರೆ. ಸುಬ್ರಜಿತ್‌ ಬೇಹರ್‌ ಎಂಬುವರು ''ವಿಕ್ಟೋರಿಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದ ವೆಂಟಿಲೇಟರ್‌ನಲ್ಲಿದ್ದ ಶೇ 97ರಷ್ಟು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆಂದು ಸುದ್ದಿ ಮೂಲಗಳು ಹೇಳುತ್ತಿವೆ'' ಎಂದು ಟ್ವೀಟ್‌ ಮಾಡಿದ್ದರು. ಅಲ್ಲದೆ ಅದನ್ನು ಕಮಿಷನರ್‌ಗೆ ಟ್ಯಾಗ್‌ ಮಾಡಿದ್ದರು. ಆ ಟ್ವೀಟ್‌ಗೆ ಪ್ರತಿಕ್ರಿಯಿಸಿದ , ''ನಿಮ್ಮ ಸುದ್ದಿ ಮೂಲದ ಬಗ್ಗೆ ಮಾಹಿತಿ ಪಡೆಯುತ್ತೇವೆ. ಅದು ತಪ್ಪಾಗಿದ್ದರೆ ಪರಿಣಾಮ ಎದುರಿಸಲು ಸಿದ್ಧವಾಗಿರಿ. ಅದು ನಿಜವಾಗಿದ್ದರೆ ಸರಕಾರ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಿದೆ'' ಎಂದು ಎಚ್ಚರಿಕೆ ನೀಡಿದ್ದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಎಂದು ಅಪರಾಧ ವಿಭಾಗದ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಅವರಿಗೆ ಟ್ವೀಟ್‌ನಲ್ಲಿಯೇ ಸೂಚನೆ ನೀಡಿದ್ದಾರೆ. ಮೂಲಗಳ ಪ್ರಕಾರ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ತಿಳಿದುಬಂದಿದೆ. ಆದರೆ ಕೊರೊನಾ ಸಮಯದಲ್ಲಿ ಇಂತಹ ಸುಳ್ಳು ಸುದ್ದಿ ಹರಡದಂತೆ ಇದೆ ವೇಳೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.


from India & World News in Kannada | VK Polls https://ift.tt/3jz7tUA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...